Wednesday, February 5, 2025
Wednesday, February 5, 2025

ವಿಕಲಚೇತನರ ರಿಯಾಯಿತಿ ಬಸ್‌ ಪಾಸ್: ಅರ್ಜಿ ಆಹ್ವಾನ

ವಿಕಲಚೇತನರ ರಿಯಾಯಿತಿ ಬಸ್‌ ಪಾಸ್: ಅರ್ಜಿ ಆಹ್ವಾನ

Date:

ಉಡುಪಿ, ಡಿ.31: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024 ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿದ್ದು, 2025 ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01 ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025 ರ ಫೆಬ್ರವರಿ 28 ರ ವರೆಗೆ ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಸ್ತಾನ ಟೋಲ್ ಪ್ಲಾಜಾ ಬಳಿ ಬಸ್ಸು ಮಾಲಕರ ಸಂಘಟನೆಯಿಂದ ಪ್ರತಿಭಟನೆ

ಕೋಟ, ಫೆ.5: ಸಾಸ್ತಾನ ಟೋಲ್ ಪ್ಲಾಜಾ ಮತ್ತು ಹೆಜಮಾಡಿ ಟೋಲ್ ಪ್ಲಾಜಾಗಳಲ್ಲಿ...

ಗಾಜಾ ಪಟ್ಟಿಯನ್ನು ಅಮೆರಿಕ ವಶಪಡಿಸಿಕೊಳ್ಳಲಿದೆ: ಅಮೆರಿಕ ಅಧ್ಯಕ್ಷ ಟ್ರಂಪ್

ಯು.ಬಿ.ಎನ್.ಡಿ., ಫೆ.5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಶ್ವೇತಭವನದಲ್ಲಿ ಇಸ್ರೇಲ್...

ಕಾಪು ಶ್ರೀ ಹೊಸ ಮಾರಿಗುಡಿ: ಧಾರ್ಮಿಕ ಸಭಾ ಕಾರ್ಯಕ್ರಮ

ಕಾಪು, ಫೆ.5: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ...

ಕಾಪು: ಪ್ರಯೋಗಾಲಯ ಉದ್ಘಾಟನೆ

ಕಾಪು, ಫೆ.5: ಅಮೆರಿಕೇರ್ ಹಾಗೂ ಅಬೊಟ್ ಸಂಸ್ಥೆ ಸಹಕಾರದೊಂದಿಗೆ ಮಣಿಪುರ ಪ್ರಾಥಮಿಕ...
error: Content is protected !!