Sunday, February 23, 2025
Sunday, February 23, 2025

ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

Date:

ಕೋಟ, ಜ.6: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮೀಣ ಜನರ ಯೋಚನೆಗಳಿಗೆ ಶಕ್ತಿ ಮತ್ತು ಆಲೋಚನೆಗಳಿಗೆ ಸಾಮರ್ಥ್ಯ ತುಂಬಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸಾಸ್ತಾನ ಐರೋಡಿಯ ಚೆನ್ನಕೇಶವ ಕಲ್ಯಾಣ ಮಂಟಪದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲ್ಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಜ್ಞಾನಾರ್ಜನೆಗೆ ಅನುಕೂಲ, ಆರೋಗ್ಯ, ಶಿಕ್ಷಣ, ಕೃಷಿಗೆ ಹೆಚ್ಚು ಒತ್ತು ನೀಡಿದ ಗ್ರಾಮಾಭಿವೃದ್ಧಿ ಯೋಜನೆ ದುರ್ಬಲರಾಗಿದ್ದ ಮಹಿಳೆಯರನ್ನು ಬಲಿಷ್ಟರನ್ನಾಗಿ ಮಾಡಿದೆ. ೩೫ವರ್ಷಗಳ ಹಿಂದೆ ಅಧಿಕಾರ ಅವಕಾಶದಿಂದ ವಂಚಿರಾಗಿದ್ದ ಮಹಿಳೆಯರು ಇಂದು ಗ್ರಾಮ ಪಂಚಾಯಿತಿಯಿಂದ ಹಿಡಿದು ಎಲ್ಲ ಕ್ಷೇತ್ರದಲ್ಲೂ ತನ್ನದೇ ಆದ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಕೀಳರಿಮೆಯನ್ನು ಬಿಟ್ಟು ಹೊರಗೆ ಬರುವ ದಾರಿಯನ್ನು ಕಲ್ಪಿಸಿಕೊಟ್ಟಿದೆ. ಆತ್ಮಸ್ಥೈರ್ಯ ತುಂಬಿಸಿದೆ ಎಂದು ಅವರು ಹೇಳಿದರು.

ಪ್ರಗತಿಬಂಧು ಸ್ವ ಸಹಾಯ ಸಂಘಗಳ ಪಾಂಡೇಶ್ವರ ವಲಯದ ಅಧ್ಯಕೆ ರಾಧಾ ಎಸ್‌ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಉಡುಪಿಯ ಜೀವನ ಕೌಶಲ್ಯದ ತರಬೇತುದಾರರಾದ ಜ್ಯೋತಿ ಪ್ರಶಾಂತ್ ಒತ್ತಡ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ವಿಷಯದ ಬಗ್ಗೆ ಮಾಹಿತಿ ನೀಡಿದರು. ಹಿರಿಯರಾದ ಕಾರ್ಕಡದ ಅಕ್ಕಯ್ಯ, ಯಡಬೆಟ್ಟಿನ ಲಕ್ಷ್ಮಿ ಮತ್ತು ಚಿಕ್ಕಮ್ಮ ಮರಕಾಲ್ತಿ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ಪ್ರಮುಖರಾದ ನಟರಾಜ ಗಾಣಿಗ, ಸುಲತಾ ಹೆಗ್ಡೆ, ಚಂದ್ರಶೇಖರ ಪೂಜಾರಿ ಇದ್ದರು. ಯೋಜನೆಯ ಬ್ರಹ್ಮಾವರ ತಾಲ್ಲೂಕು ಯೋಜನಾಧಿಕಾರಿ ರಮೇಶ ಪಿ.ಕೆ ಸ್ವಾಗತಿಸಿ, ಕುಸುಮಾ ಹೆಬ್ಬಾರ್‌ಸಾಧನಾ ವರದಿ ವಾಚಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!