Monday, February 24, 2025
Monday, February 24, 2025

ಶಿಕ್ಷಣ ಕ್ಷೇತ್ರಕ್ಕೆ ಎ.ಐ. ವರದಾನ: ಆಶಾ ಶೆಟ್ಟಿ

ಶಿಕ್ಷಣ ಕ್ಷೇತ್ರಕ್ಕೆ ಎ.ಐ. ವರದಾನ: ಆಶಾ ಶೆಟ್ಟಿ

Date:

ಶಂಕರನಾರಾಯಣ, ಜ.7: ಕೃತಕ ಬುದ್ಧಿಮತ್ತೆ ಅಥವಾ ಎಐ ತಂತ್ರಜ್ಞಾನವು ಮಾನವನ ಬದುಕು ಮತ್ತು ಅಭಿವೃದ್ದಿಗೆ ವರದಾನವಾಗಿದೆ. ಎಐ ಬಳಕೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸುತ್ತದೆ. ಅಧ್ಯಯನ, ಸಂಶೋಧನೆ ಮತ್ತು ಉದ್ಯೋಗಾವಕಾಶಗಳ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಶಿಕ್ಷಣ ಫೌಂಡೇಶನ್ ಬೆಂಗಳೂರು ಇದರ ತರಬೇತುದಾರರಾದ ಆಶಾ ಶೆಟ್ಟಿ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿ ಆಯೋಜಿಸಿದ್ದ ಎಐ ಕುರಿತ ಕೌಶಲ್ಯ ಅಭಿವೃದ್ಧಿ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಾರ್ಯಾಗಾರದ ಕುರಿತು ಎಂ.ಕಾಂ.ವಿದ್ಯಾರ್ಥಿಗಳಾದ ಶಶಾಂಕ್, ವಿಜಯಲಕ್ಷ್ಮಿ ಮತ್ತು ಪಲ್ಲವಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡುತ್ತಾ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎಐ ಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸ್ನಾತಕೋತ್ತರ ವಿಭಾಗ ಸಂಯೋಜಕರಾದ ಪ್ರಜ್ಞಾ ತರಬೇತಿ ಕಾರ್ಯಕ್ರಮ ಸಂಘಟಿಸಿ ಪ್ರಸ್ತಾವನೆಗೈದರು. ಉಪನ್ಯಾಸಕರಾದ ಸುಬ್ರಹ್ಮಣ್ಯ ಅಡಿಗ, ಶೈಲಜಾ ಮತ್ತು ರಾಜೇಂದ್ರ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!