Tuesday, February 25, 2025
Tuesday, February 25, 2025

ಕನ್ನಡವೇ ಕನ್ನಡಿಗರ ಜೀವನಾಡಿ: ಸತೀಶ್ ನಾಯ್ಕ್

ಕನ್ನಡವೇ ಕನ್ನಡಿಗರ ಜೀವನಾಡಿ: ಸತೀಶ್ ನಾಯ್ಕ್

Date:

ಕೋಟ: “ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು” ಎಂದು ಕವಿ ಕುವೆಂಪು ಕನ್ನಡದ ಭಾಷೆಯ ಮಹತ್ವವನ್ನು ಸಾರಿದ್ದಾರೆ. ಕನ್ನಡಿಗರಾದ ನಾವುಗಳು ಕನ್ನಡ ಭಾಷೆಯ ಉಳಿವು ಮತ್ತು ಬೆಳೆಸುವುದಕ್ಕೆ ಪಣ ತೊಟ್ಟು ಕನ್ನಡವನ್ನು ಪ್ರಪಂಚ ಉದ್ದಗಲಕ್ಕೂ ಪಸರಿಸುವ ಕೆಲಸವಾಗಬೇಕು.

ಕನ್ನಡ ನಮ್ಮ ದಿನನಿತ್ಯ ಮಾತನಾಡುವ ಭಾಷೆಯಾಗಿರದೇ ನಮ್ಮ ಎಲ್ಲಾ ಕಾಯಕದಲ್ಲೂ ಬಳಸಿಕೊಳ್ಳಬೇಕು. ಕನ್ನಡವೇ ಕನ್ನಡಿಗರ ಜೀವನಾಡಿಯಾಗಿದೆ ಎಂದು ಮಹಾತ್ಮ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಸತೀಶ್
ನಾಯ್ಕ್ ಅವರು ಹೇಳಿದರು.

ಅವರು ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಯ್ಬ್ರಕಟ್ಟೆ ಶ್ರೀ ವಿನಾಯಕ ಯುವಕ ಮಂಡಲ ಸಾಯ್ಬ್ರಕಟ್ಟೆ –ಯಡ್ತಾಡಿ ಇವರ ಸಹಯೋಗದಲ್ಲಿ ನಡೆದ ಮಾತಾಡ್ ಮಾತಾಡ್ ಕನ್ನಡ –ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರವನ್ನು ಶ್ರೀ ವಿನಾಯಕ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ದೇವಾಡಿಗ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಹಾಗೂ ಕನ್ನಡ ನಾಡು ನುಡಿಯ ರಕ್ಷಣೆ ಸಂಕಲ್ಪವನ್ನು ಶಿಕ್ಷಕ ಗಣೇಶ್ ನಾಯಕ್ ಶಿರಿಯಾರ ಅವರು ನೆರವೇರಿಸಿದರು.

ಯುವಕ ಮಂಡಲದ ಕಾರ್ಯದರ್ಶಿ ಪ್ರಭಾಕರ ಪೂಜಾರಿ, ಮೆಟ್ರಿಕ್ ಪೂರ್ವ ಬಾಲಕಿರ ವಸತಿ ನಿಲಯದ ಮೇಲ್ವಿಚಾರಕಿ ಜಯಂತಿ, ಶಾಲೆಯ ಹಳೆ ವಿದ್ಯಾರ್ಥಿ ತೇಜ ನಾಯ್ಕ್, ಶಾಲೆಯ ಅಧ್ಯಾಪಕ ವೃಂದ, ಯುವಕ ಮಂಡಲದ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!