Monday, February 24, 2025
Monday, February 24, 2025

ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

Date:

ಕೋಟ, ಜ.14: ಕಲೆಯನ್ನು ಆರಾಧಿಸಿ ಅದನ್ನು ವೇದಿಕೆಯಾಗಿರಿಸಿಕೊಂಡು ಸಾಮಾಜಿಕ ಕೈಂಕರ್ಯ ನಿಜಕ್ಕೂ ಶ್ಲಾಘನೀಯ ಎಂದು ಯೋಗಗುರುಕುಲ ಇದರ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಹೇಳಿದರು. ಸೋಮವಾರ ಯಡಬೆಟ್ಟು ಹಗ್ರಿ ಪರಿಸರದಲ್ಲಿ ಯಕ್ಷಮಿತ್ರರು ಯಡಬೆಟ್ಟು ಸಾಸ್ತಾನ ಆಶ್ರಯದಲ್ಲಿ ಯಕ್ಷರಾತ್ರಿ ಅದ್ಧೂರಿಯ ಯಕ್ಷ ವೇದಿಕೆಯಲ್ಲಿ ಸಾಧಕ ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನಗೈದು ಅವರು ಮಾತನಾಡಿದರು. ರಾಜ್ಯಮಟ್ಟದ ಹ್ಯಾಮರ್ ಸಾಧಕ ತನುಷ್ ಪೂಜಾರಿಯವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ವೇದಿಕೆಯಲ್ಲಿ ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಸಾಸ್ತಾನದ ಬ್ರಹ್ಮಬೈದರ್ಕಳ ಗೋಳಿಗರಡಿ ಪಾತ್ರಿ ಶಂಕರ್ ಪೂಜಾರಿ, ಯಕ್ಷಮಿತ್ರರು ತಂಡದ ಗೌರವಾಧ್ಯಕ್ಷ ಕರಿಯ ದೇವಾಡಿಗ, ಅಧ್ಯಕ್ಷ ಗೋಪಾಲ ಮೆಂಡನ್ ಉಪಸ್ಥಿತರಿದ್ದರು. ನಿರೂಪಕ ಅಭಿಜಿತ್ ಪಾಂಡೇಶ್ವರ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಸುಂಕದಕಟ್ಟೆ ಮೇಳದ ಕಲಾವಿದರಿಂದ ಶ್ರೀದೇವಿ ಮಹಾತ್ಮೆ ಪ್ರಸಂಗ ಪ್ರದರ್ಶನಗೊಂಡಿತು. ಮೆರವಣಿಗೆ, ಗಣಪತಿ ಪೂಜಾ ಕಾರ್ಯಕ್ರಮ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!