Monday, February 24, 2025
Monday, February 24, 2025

ಮಣಿಪಾಲ: 4ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಉದ್ಘಾಟನೆ

ಮಣಿಪಾಲ: 4ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಉದ್ಘಾಟನೆ

Date:

ಮಣಿಪಾಲ, ಜ.17: ಬಹು ನಿರೀಕ್ಷಿತ 4ನೇ ಆವೃತ್ತಿಯ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಅನ್ನು ಮಣಿಪಾಲದಲ್ಲಿ ಬಹಳ ಉತ್ಸಾಹದಿಂದ ಉದ್ಘಾಟಿಸಲಾಯಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಸಂಭ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ 24 ತಂಡಗಳು ಭಾಗವಹಿಸಲಿವೆ.

ಮಣಿಪಾಲ ಎಂಡ್ ಪಾಯಿಂಟ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆದಿದ್ದು, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಉಪ ಕುಲಪತಿ ಲೆ.ಜ (ಡಾ) ಎಂ.ಡಿ ವೆಂಕಟೇಶ್ ವಿ ಎಸ್ ಎಂ (ನಿವೃತ್ತ) ಜಂಟಿಯಾಗಿ ಪ್ರತಿಷ್ಠಿತ ಟ್ರೋಫಿಯನ್ನು ಅನಾವರಣಗೊಳಿಸುವುದರ ಮೂಲಕ ಉದ್ಘಾಟಿಸಿದರು. ಡಾ. ಎಚ್ ಎಸ್ ಬಲ್ಲಾಳ್ ಅವರು ಮಾತನಾಡಿ, ತಮ್ಮ ಭಾಷಣದಲ್ಲಿ ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಮಾಹೆ ಮಣಿಪಾಲದ ಅಚಲ ಬೆಂಬಲವನ್ನು ಒತ್ತಿ ಹೇಳಿದರು. ಸಂಸ್ಥೆಯೊಳಗೆ ಸಮಗ್ರ ಅಭಿವೃದ್ಧಿ ವಾತಾವರಣವನ್ನು ಬೆಳೆಸುವ ಬದ್ಧತೆಯ ಭಾಗವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಅನ್ನು ಆಯೋಜಿಸಿದ್ದಕ್ಕಾಗಿ ಕಸ್ತೂರ್ಬಾ ಆಸ್ಪತ್ರೆಯನ್ನು ಅವರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ವೆಂಕಟೇಶ್, ಈ ಪಂದ್ಯಾವಳಿಯು ಸಂಬಂಧಗಳನ್ನು ಬಲಪಡಿಸುವುದು ಮತ್ತು ಉದ್ಯೋಗಿಗಳಿಗೆ ಉಲ್ಲಾಸಕರ ವಿರಾಮವನ್ನು ನೀಡುತ್ತದೆ ಮಾತ್ರವಲ್ಲದೆ ತಂಡಗಳ ಮದ್ಯೆ ಮತ್ತು ಸಂಘಟಕರಿಗೆ ವಿಚಾರಗಳು ಹಾಗೂ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾಹೆ ಮಣಿಪಾಲದ ಸಿಓಓ ಡಾ. ರವಿರಾಜ್ ಎನ್ ಎಸ್., ಮಾಹೆ ಮಣಿಪಾಲದ ಸಹ ಉಪ ಕುಲಪತಿಗಳಾದ ಡಾ.ಶರತ್ ಕುಮಾರ್ ರಾವ್, ಸಿ ಜಿ ಮುತ್ತಣ್ಣ -ಸಲಹೆಗಾರರು ಮಾಹೆ , ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿಓಓ ಡಾ. ಆನಂದ್ ವೇಣುಗೋಪಾಲ್, ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ ಶಿರನ್ ಶೆಟ್ಟಿ, ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ ಡೀನ್ ಡಾ. ಜಿ ಅರುಣ್ ಮೈಯ್ಯ, ಮಾರುಕಟ್ಟೆ ಮುಖ್ಯಸ್ಥ ಸಚಿನ್ ಕಾರಂತ್, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕ್ರಿಕೆಟ್ ಪಂದ್ಯಾವಳಿಯು17ನೇ ಜನವರಿ 2025 ರಿಂದ 19ನೇ ಜನವರಿ 2025 ರವರೆಗೆ ಪಂದ್ಯಾವಳಿ ನಡೆಯಲಿದ್ದು, ಆದಿತ್ಯವಾರ 19ನೇ ಜನವರಿ 2025 ರಂದು ಸಂಜೆ 4:00 ಕ್ಕೆ ಸಮಾರೂಪ ಸಮಾರಂಭ ನಡೆಯಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!