Sunday, February 23, 2025
Sunday, February 23, 2025

ಕರ್ನಾಟಕ ಕ್ರೀಡಾಕೂಟ ಸೈಕ್ಲಿಂಗ್ ಸ್ಪರ್ಧೆ: ಉಡುಪಿ ಜಿಲ್ಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ

ಕರ್ನಾಟಕ ಕ್ರೀಡಾಕೂಟ ಸೈಕ್ಲಿಂಗ್ ಸ್ಪರ್ಧೆ: ಉಡುಪಿ ಜಿಲ್ಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ

Date:

ಉಡುಪಿ, ಜ.18: ಕರ್ನಾಟಕ ಕ್ರೀಡಾಕೂಟದ ಅಂಗವಾಗಿ ಜನವರಿ 19 ರಂದು ಸೈಕ್ಲಿಂಗ್ ಸ್ಪರ್ಧೆಯು ಬ್ರಹ್ಮಾವರ ತಾಲೂಕಿನ ಕೊಳಲಗಿರಿ ವಾಟರ್ ಟ್ಯಾಂಕ್‌ನಿಂದ ಪೆರ್ಡೂರು ಮಾರ್ಗದಲ್ಲಿ ಬರುವ ಕುಕ್ಕೆಹಳ್ಳಿ ಜಂಕ್ಷನ್ ಸಮೀಪದ ಶಾಂತಿವನ ಜಂಕ್ಷನ್ ವರೆಗೆ 10 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯಮಟ್ಟದ ಸೈಕಲ್ ಸ್ಪರ್ಧೆಯು ನಡೆಯುವ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಗಿನಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಪೆರ್ಡೂರು ಹಾವಂಜೆ-ಕೊಳಲಗಿರಿ, ಅಮ್ಮುಂಜೆ, ಉಪ್ಪೂರು ಮಾರ್ಗವಾಗಿ ರಾಷ್ರೀಯ ಹೆದ್ದಾರಿ 66 ಕ್ಕೆ ಹೋಗುವ ವಾಹನಗಳು ಬದಲಿ ಮಾರ್ಗವಾಗಿ ಹಿರಿಯಡ್ಕ-ಮಣಿಪಾಲ ಮಾರ್ಗವಾಗಿ ಉಡುಪಿಗೆ ತೆರಳಬೇಕು. ಪೇತ್ರಿಯಿಂದ ಪೆರ್ಡೂರು ಕಡೆಗೆ ಹೋಗುವ ವಾಹನಗಳು ಬದಲಿ ಮಾರ್ಗವಾಗಿ ಕರ್ಜೆ-ಅಲಂಗಾರು ಮಾರ್ಗವಾಗಿ ಪೆರ್ಡೂರು ಕಡೆಗೆ ತೆರಳಬೇಕು. ಪೇತ್ರಿಯಿಂದ ಕುಕ್ಕೆಹಳ್ಳಿಗೆ ಹೋಗುವ ಮಾರ್ಗದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ 66 ರಿಂದ ಉಪ್ಪೂರು-ಉಗ್ಗೆಲಬೆಟ್ಟು-ನಂದಿನಿ ಕೆಎಂಎಫ್-ಕೊಳಲಗಿರಿ ಮಾರ್ಗದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ 66 ರಿಂದ ಕೆ.ಜಿ.ರಸ್ತೆ, ಅಮ್ಮುಂಜೆ- ಕೊಳಲಗಿರಿ- ಹಾವಂಜೆ- ಕುಕ್ಕೆಹಳ್ಳಿ ಮಾರ್ಗದ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!