Sunday, February 23, 2025
Sunday, February 23, 2025

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

Date:

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ ವಾಹನವನ್ನು ಕುಂಜಿಬೆಟ್ಟು, ಕಡಿಯಾಳಿ ಭಾಗದ ವಾಹನ ಸಿಟಿ ಬಸ್ ನಿಲ್ದಾಣದ ವರೆಗೆ ತಲುಪಿ ಸಾಗಿ ಬರುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಿ ಈ ಹಿಂದಿನಂತೆ ಸುಗಮ ಸಂಚಾರಕ್ಕೆ ಅವಕಾಶ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರಿಗೆ ತಿಳಿಸಿದರು.

ನಗರಸಭೆ ವತಿಯಿಂದ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಶೀಘ್ರವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಈಗಾಗಲೇ ಕ್ರಮ ವಹಿಸಲಾಗಿದೆ. ಕಲ್ಸಂಕ ಜಂಕ್ಷನ್ ಸಂಚಾರ ನಿರ್ಬಂಧದಿಂದಾಗಿ ಇದೀಗ ಕುಂಜಿಬೆಟ್ಟು ಹಾಗೂ ಸಿಟಿ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಕಡಿಯಾಳಿ ದೇವಸ್ಥಾನ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಯ ಗಂಭೀರತೆ ಪರಿಗಣಿಸಿ ತಕ್ಷಣ ಸುಗಮ ಸಂಚಾರಕ್ಕೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.

ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ಹಾಗೂ ಸ್ಥಳೀಯ ಮುಖಂಡರಾದ ವಿಷ್ಣು ಪ್ರಸಾದ್ ಪಾಡಿಗಾರ್, ಸತೀಶ್ ಕುಲಾಲ್, ಶಶಿಧರ್ ಭಟ್, ಚಂದ್ರಕಾಂತ್, ಉಮೇಶ್ ಪೈ, ರಾಜ ಜತ್ತನ್ನ, ನರಸಿಂಹ ಕಿಣಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!