Sunday, February 23, 2025
Sunday, February 23, 2025

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

Date:

ಉಡುಪಿ, ಜ.19: ಅಂಬಾಗಿಲು – ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ ರಸ್ತೆಗೆ ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು ಮುಚ್ಚಿ ಈ ರಸ್ತೆಯಲ್ಲಿ ಬರುವ ವಾಹನಗಳು ಉಡುಪಿ ನಗರ ಪ್ರವೇಶಿಸಲು ಕಡಿಯಾಳಿ ಭಾಗದಲ್ಲಿ ಅವಕಾಶ ನೀಡಿರುವುದು ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ಇದರಿಂದ ಇತರ ಎಲ್ಲಾ ಕಡೆಯಲ್ಲೂ ವಾಹನ ದಟ್ಟಣೆಯಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ತಕ್ಷಣದಲ್ಲಿ ಮುಚ್ಚಿರುವ ರಸ್ತೆಯನ್ನು ತೆರವುಗೊಳಿಸಿ ಈ ಹಿಂದಿನಂತೆ ಸಂಚಾರ ವ್ಯವಸ್ಥೆಗೆ ಅವಕಾಶ ನೀಡುವಂತೆ ನಾನು ಜಿಲ್ಲಾಡಳಿತವನ್ನು ಆಗ್ರಹಿಸುತ್ತೇನೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ಈ ರಸ್ತೆಯನ್ನು ಮುಚ್ಚಿರುವುದರಿಂದ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಬರುವವರಿಗೆ, ಶಾಲಾ ಕಾಲೇಜುಗಳಿಗೆ ತೆರಳುವವರಿಗೆ ಹಾಗೂ ಪ್ರವಾಸಿಗರಿಗೆ ಸಮಸ್ಯೆಯಾಗುವ ಜೊತೆಯಲ್ಲಿ ಇತರ ಭಾಗಗಳಿಗೂ ವಾಹನ ದಟ್ಟಣೆ ಹರಡಿರುವುದನ್ನು ಗಮನಿಸಬೇಕಾಗಿದೆ. ಉಡುಪಿ ನಗರ ಪ್ರವೇಶಿಸುವ ರಸ್ತೆಗಳ ವಾಹನ ದಟ್ಟಣೆಯನ್ನು ನಿಯಂತ್ರಿಸಲು ರಸ್ತೆಗಳನ್ನು ಮುಚ್ಚುವುದು ಪರಿಹಾರವಲ್ಲ. ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ. ಈಗಾಗಲೆ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ತಕ್ಷಣದಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್‌ ಅಳವಡಿಸಿ. ರಸ್ತೆ ಮುಚ್ಚಿರುವ ಅವೈಜ್ಞಾನಿಕ ಕ್ರಮದಿಂದ ಪೊಲೀಸರಿಗೆ ಕೆಲಸ ಕಡಿಮೆಯಾಗಿದೆಯೆ ಹೊರತು ಸಾರ್ವಜನಿಕರಿಗೆ ಅನುಕೂಲವಾಗುವ ಬದಲು ಹೆಚ್ಚಿನ ತೊಂದರೆಯಾಗಿದೆ. ತಕ್ಷಣದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕಲ್ಸಂಕ ಜಂಕ್ಷನ್ ನಲ್ಲಿ ಮುಚ್ಚಿರುವ ಉಡುಪಿ ಪ್ರವೇಶಿಸುವ ಅಂಬಾಗಿಲು – ಗುಂಡಿಬೈಲು ರಸ್ತೆಯ ಬ್ಯಾರಿಕೇಡ್ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಈ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್‌ ಅಳವಡಿಸಿ ಎಂದು ರಘುಪತಿ ಭಟ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!