Sunday, February 23, 2025
Sunday, February 23, 2025

ಕರ್ನಾಟಕ ಬ್ಯಾಂಕ್: 53ನೇ ವಾರ್ಷಿಕೋತ್ಸವ

ಕರ್ನಾಟಕ ಬ್ಯಾಂಕ್: 53ನೇ ವಾರ್ಷಿಕೋತ್ಸವ

Date:

ಸಾಲಿಗ್ರಾಮ, ಜ.20: ಕರ್ನಾಟಕ ಬ್ಯಾಂಕಿನ ಚಿತ್ರಪಾಡಿ ಸಾಲಿಗ್ರಾಮ ಶಾಖೆಯ ೫೩ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಬ್ಯಾಂಕ್‌ನಲ್ಲಿ ಜರುಗಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಸಾಲಿಗ್ರಾಮ ದೇವಸ್ಥಾನದ ಅಧ್ಯಕ್ಷರಾದ ಡಾ. ಕೆ. ಎಸ್ ಕಾರಂತ ಬ್ಯಾಂಕಿನ ಪ್ರಗತಿಯನ್ನು ಶ್ಲಾಘಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಪ್ರಾದೇಶಿಕ ಕಛೇರಿಯ ಎ.ಜಿ.ಎಂ ವಾದಿರಾಜ್ ಕೆ ವಹಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕತ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಇವರನ್ನು ಬ್ಯಾಂಕಿನ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಕರ್ಣಾಟಕ ಬ್ಯಾಂಕ್‌ನ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯ, ಅಘೋರೇಶ್ವರ ದೇಗುಲದ ಅಧ್ಯಕ್ಷ ಚಂದ್ರಶೇಖರ ಕಾರಂತ, ಸ್ಥಳೀಯರಾದ ಚಂದ್ರಶೇಖರ ಸೋಮಯಾಜಿ, ಕರ್ಣಾಟಕ ಬ್ಯಾಂಕ್‌ನ ನಿವೃತ್ತ ಡಿಜಿಎಮ್ ಆನಂದರಾಮ ಅಡಿಗ, ಬೈಕಾಡಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು. ಬ್ಯಾಂಕಿನ ವ್ಯವಸ್ಥಾಪಕರಾದ ಅವಿನಾಶ್ ಸ್ವಾಗತಿಸಿ, ಸಿಬ್ಬಂದಿಗಳಾದ ರಶ್ಮಿ ವಂದಿಸಿದರು. ವಿನಯ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!