Sunday, February 23, 2025
Sunday, February 23, 2025

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

Date:

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​ ಇಲಾಖೆ, ​ನುಡಿ ಘಟಕ ಮಣಿಪಾಲ ಸಿವಿಲ್ ಇಂಜಿನಿಯರಿಂಗ್ ವಿಭಾಗ ಸಹಯೋಗದೊಂದಿಗೆ ಸಂಚಾರ ಜಾಗೃತಿ ಸಪ್ತಾಹವನ್ನು ಯಶಸ್ವಿಯಾಗಿ ನಡೆಯಿತು. ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಮನೋಹರ್ ಹೆಚ್ ಕೆ ಉದ್ಘಾಟಿಸಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಮತ್ತು ಸಮುದಾಯಕ್ಕೆ ಟ್ರಾಫಿಕ್ ಸಿಗ್ನಲ್ ಜಾಗೃತಿ, ಮದ್ಯಪಾನ ಮತ್ತು ಚಾಲನೆಯ ಅಪಾಯಗಳು, ಜವಾಬ್ದಾರಿಯುತ ಪಾರ್ಕಿಂಗ್ ಅಭ್ಯಾಸಗಳು, ಸಂಚಾರ ಅಡಚಣೆಗಳನ್ನು ಕಡಿಮೆ ಗೊಳಿಸುವುದು, ಟ್ರಾಫಿಕ್ ಸಿಗ್ನಲ್ ಜಾಗೃತಿ ಶಿಕ್ಷಣ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಎನ್‌ಎಸ್‌ಎಸ್ ತಂಡದ ನಾಯಕರಾದ ವಿಜಯಾಂಶ್ ಚೌರಾಸಿಯಾ ವಂದಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಮದ್ದೋಡಿ, ಡಾ.ಲಕ್ಷ್ಮಣ ರಾವ್, ಡಾ. ಪೂರ್ಣಿಮಾ ಭಾಗವತ​, ಡಾ. ಹರ್ಷಿಣಿ ದಾಸರಿ, ಡಾ. ಮಹಾಶ್ವೇತಾ ಮೇಗಾರ್, ಘಟಕದ ಮುಖ್ಯಸ್ಥರಾದ ಅಕ್ಷತ ಕುರಾನಾ, ಸಂಜನಾ ಮತ್ತು ಕಣವ್ ಸಚ್ದೇವ ಮುಂತಾದವರು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!