Wednesday, July 29, 2026
Wednesday, July 29, 2026

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

Date:

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ವಿಜಯ್ ಕೊಡವೂರು, ಕೊಡವೂರು ವಾರ್ಡಿನಲ್ಲಿ ಒಟ್ಟು 9 ಬಸ್ಸು ನಿಲ್ದಾಣವಿದ್ದು, ಈಗಾಗಲೇ 3 ಬಸ್ಸು ನಿಲ್ದಾಣವನ್ನು ಶ್ರಮದಾನ ಮೂಲಕ ಹೊಸತಾಗಿ ನಿರ್ಮಾಣ ಕಾರ್ಯ ನಡೆದಿದ್ದು. ಪಾಳೆಕಟ್ಟೆ ಪರಿಸರದಲ್ಲಿನ ಅತ್ಯಂತ ಹಳೆಯ ಬಸ್ಸು ನಿಲ್ದಾಣವಾಗಿದ್ದು ಮಳೆಗಾಲದ ಸಮಯದಲ್ಲಿ ಮಳೆಯ ನೀರು ಸೋರುತಿದ್ದು, ಅಪಾಯದ ಅಂಚಿನಲ್ಲಿತ್ತು. ಇದನ್ನು ಗಮನಿಸಿ ಅನುದಾನದ ಮೂಲಕ ಹೊಸ ಬಸ್ಸು ನಿಲ್ದಾಣಕ್ಕೆ ಗುದ್ದಲಿ ಪೂಜೆ ನಡೆಸಲಾಗಿದೆ ಎಂದರು.

ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷರಾದ ಹರೀಶ್, ದಿನೇಶ್, ರವಿ, ಶಂಭು ಮಾಸ್ಟರ್, ಸುಂದರ್ ಜಲಶಾಂತಿ, ಉಮೇಶ್ ರತ್ನಾಕರ್, ಯಶೋಧ ರಾಜೇಂದ್ರ, ಅಶೋಕ್ ಶೆಟ್ಟಿಗಾರ್, ಪ್ರಭಾತ್, ವಿನಯ್ ಗರ್ಡೆ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!