Sunday, February 23, 2025
Sunday, February 23, 2025

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

Date:

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು ನಡೆಯುತ್ತಿದ್ದು ಮತ್ತೊಂದೆಡೆ ಕಠಿಣ ಕ್ರಮದ ಕೊರತೆಯಿಂದ ಕಿಡಿಗೇಡಿಗಳು ಊರಿನ ಸೌಂದರ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಘಟನೆಗಳು ರಾಜಾರೋಶವಾಗಿ ನಡೆಯುತ್ತಿದೆ. ಒಂದೆಡೆ ಉಡುಪಿ ಜಿಲ್ಲೆ ಕರ್ನಾಟಕ ಒಲಂಪಿಕ್ಸ್ ಆಯೋಜಿಸುತ್ತಿದ್ದು ರಾಜ್ಯಕ್ಕೆ ಹೆಮ್ಮೆಯಾಗಿದೆ. ರಾಜ್ಯದ ಮೂಲೆಮೂಲೆಗಳ ಕ್ರೀಡಾಪಟುಗಳು ಉಡುಪಿಯ ಸೌಂದರ್ಯವನ್ನು ಕೊಂಡಾಡುತ್ತಿದ್ದಾರೆ. ಆದರೆ, ಉಡುಪಿ ಜಿಲ್ಲೆಯ ಉಪ್ಪೂರು ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಗಳಲ್ಲಿ ಕಿಡಿಗೇಡಿಗಳು ದಿನನಿತ್ಯ ತ್ಯಾಜ್ಯವನ್ನು ಯದ್ವಾ ತದ್ವಾ ಎಸೆದು ಜಿಲ್ಲೆಯ ಸೌಂದರ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಪ್ಲಾಸ್ಟಿಕ್, ಕೊಳೆತ ಆಹಾರ ಪದಾರ್ಥಗಳು, ಶೂ, ಟ್ಯೂಬ್ ಲೈಟ್, ಸೀಸದ ಬಾಟಲ್, ಸ್ಯಾಣಿಟರಿ ನ್ಯಾಪ್ಕಿನ್ ಹೀಗೆ ವೈವಿಧ್ಯಮಯ ವಸ್ತುಗಳು ರಸ್ತೆಯ ಇಕ್ಕೆಲಗಳಲ್ಲಿ ಪ್ರದರ್ಶನಕ್ಕೆ ಇಟ್ಟ ಹಾಗೆ ಹರಡಿಕೊಂಡಿವೆ.

ಸಂಜೆ ಆದ ಬಳಿಕ ವ್ಯವಸ್ಥಿತವಾಗಿ ಎಲ್ಲಾ ಪ್ಲಾಸ್ಟಿಕ್ ಸೇರಿದಂತೆ ಎಲ್ಲಾ ತ್ಯಾಜ್ಯಗಳನ್ನು ಸುಡುವ ಅವೈಜ್ಞಾನಿಕ ಕಾರ್ಯ ನಡೆಯುತ್ತಿದೆ. ಪ್ಲಾಸ್ಟಿಕ್ ಸುಡಬಾರದು ಎಂದು ಸರ್ಕಾರ ಪದೇ ಪದೇ ಹೇಳುತ್ತಿದ್ದರೂ ಇದನ್ನು ಗಾಳಿಗೆ ತೂರಲಾಗುತ್ತಿದೆ. ಒಂದೆಡೆ ತ್ಯಾಜ್ಯ ಎಸೆದು ಊರಿನ ಸ್ವಚ್ಛತೆಗೆ ಧಕ್ಕೆ ಬಂದರೆ, ಮತ್ತೊಂದೆಡೆ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯಕ್ಕೆ ಬೆಂಕಿ ಇಟ್ಟು ವಾಯು ಮಾಲಿನ್ಯ, ಶ್ವಾಸಕೋಶದ ಕಾಯಿಲೆಗಳಿಗೆ ಆಹ್ವಾನ ನೀಡುವ ಘಟನೆ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ನಡೆಯುತ್ತಿದೆ ಎನ್ನುತ್ತಾರೆ ಸ್ಥಳೀಯರು.

ಸ್ಥಳೀಯಾಡಳಿತ ಇನ್ನಾದರೂ ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಪೂರ್ಣ ವಿರಾಮ ಹಾಕದಿದ್ದರೆ ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆಯಾಗಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!