Sunday, February 23, 2025
Sunday, February 23, 2025

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

Date:

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋವು ಮಧುರಂ ವೈಟ್ ಲೋಟಸ್ ಹೋಟೆಲ್ ಸಹಯೋಗದೊಂದಿಗೆ ಸಂಯೋಜಿಸಿದ ಬೃಂದಾವನದಿಂದ ಉಡುಪಿಯೆಡೆಗೆ ಸಾಂಝಿ ಕಲಾಕೃತಿಗಳ ಪ್ರದರ್ಶನವನ್ನು ಆರ್ಕಿಟೆಕ್ಟ್ ಶ್ರೀಜಾ ಜಯಕುಮಾರ್ ಉದ್ಘಾಟಿಸಿದರು. ಭಾರತೀಯ ಕಲೆಯಲ್ಲಿಯೇ ಶ್ರೇಷ್ಠವಾದ ಹಾಗೂ ರಾಧೆಯ ಪ್ರೀತಿಯೊಂದಿಗೆ ಬೆಸೆದಿರುವ ಸಾಂಝಿ ಕಲೆಯನ್ನು ಉಡುಪಿಯ ಕಲಾ ರಸಿಕರಿಗೆ ಉಣಬಡಿಸುತ್ತಿರುವ ಭಾಸ ಗ್ಯಾಲರಿಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಇಂದಿನ ಕಟ್ಟಡಗಳ ಒಳಾಂಗಣ ವಿನ್ಯಾಸದಲ್ಲಿ ಈ ತೆರನಾದ ಕಲೆಗಳ ಮಹತ್ವ ಉಡುಪಿಯ ಕಲಾಪ್ರಿಯರಲ್ಲಿ ಒಂದು ಹೊಸ ಸಂಚಲನವನ್ನೇ ಸೃಜಿಸಬಹುದು. ನಾವೆಲ್ಲ ಸೇರಿಕೊಂಡು ಈ ದೇಶೀಯ ಕಲೆಗೆ ಪ್ರೋತ್ಸಾಹಿಸೋಣ ಎಂದರು.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಲಾವಿದರಾದ ರಾಮ್ ಸೋನಿಯವರು ಸಾಂಝಿ ಕಲೆಯ ಬೆಳವಣಿಗೆ ಹಾಗೂ ತಮ್ಮ ಕಲಾಕೃತಿಗಳಲ್ಲಿ ಕಂಡುಕೊಳ್ಳುತ್ತಿರುವ ನವೀನ ಪ್ರಯೋಗಗಳ ಬಗೆಗೆ ವಿವರಿಸಿದರು. ಚಿನ್ನದ ಲೇಪದೊಂದಿಗೆ ಸಾಂಝಿ ಕಲೆಯ ನಿರ್ಮಾಣ ಸೋನಿಯವರ ವಿಶೇಷತೆ. ಸುಮಾರು ನಲವತ್ತಕ್ಕೂ ಮಿಕ್ಕಿ ಪೇಪರ್ ಕಟ್ಟಿಂಗ್ ಕಲಾಕೃತಿಗಳೊಂದಿಗೆ ಚಿನ್ನ ಹಾಗೂ ಬೆಳ್ಳಿಯ ತೆಳುವಾದ ಪದರದ ಮೇಲೆ ಕೃಷ್ಣನ ವಿವಿಧ ಲೀಲೆಗಳನ್ನು ದರ್ಶಿಸಿರುವ ಕಲಾಕೃತಿಗಳೂ ಪ್ರದರ್ಶನದಲ್ಲಿವೆ ಎಂದರು.

ಕಲಾ ಪ್ರದರ್ಶನವು 26 ನೇ ಭಾನುವಾರದ ಅಪರಾಹ್ನ 3 ರಿಂದ ಸಂಜೆ 7ರ ತನಕ ಸಾರ್ವಜನಿಕ ವೀಕ್ಷಣೆಗೆ ತೆರೆದಿರಲಿದ್ದು, ಇದೇ ಸಂದರ್ಭದಲ್ಲಿ ಶನಿವಾರ ಹಾಗೂ ಭಾನುವಾರಗಳಂದು ಸಾಂಝಿ ಕಲೆ ಹಾಗೂ ನೀರಿನ ಮೇಲೆ ನಿರ್ಮಿಸುವ ರಂಗೋಲಿ ಕಲೆಯಾದ ಜಲ ಸಾಂಝಿ ಕಲೆಯ ಕಾರ್ಯಾಗಾರಗಳು ನೋಂದಾಯಿಸಿದವರಿಗಾಗಿ ಬಡಗುಪೇಟೆಯ ಗ್ಯಾಲರಿಯಲ್ಲಿ ನಡೆಯಲಿವೆ ಎಂಬುದಾಗಿ ಕಾರ್ಯಕ್ರಮ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ ಹೇಳಿದರು. ಫೌಂಡೇಶನ್‌ನ ಅಧ್ಯಕ್ಷರಾದ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿದ್ದರು. ಆಶ್ಲೇಷ್ ಆರ್. ಭಟ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!