ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ವರ್ಷಾಚರಣೆಯ ಅಂಗವಾಗಿ ಶ್ರೀರಾಮ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಶಿವರಾಮ ಉಡುಪ ಉದ್ಘಾಟಿಸಿದರು. ಸ್ಥಳೀಯರಾದ ನಾಗರಾಜ್ ಮಯ್ಯ, ಸುರೇಂದ್ರ ಗಾಣಿಗ, ವಾಹನ ಚಾಲಕರು ಮತ್ತು ಮಾಲಕರ ಸಂಘದ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ
Date: