Sunday, July 26, 2026
Sunday, July 26, 2026

ಈಶ್ವರ್ ಮಲ್ಪೆ ತಂಡದ ಕಾರ್ಯ ಶ್ಲಾಘನೀಯ

ಈಶ್ವರ್ ಮಲ್ಪೆ ತಂಡದ ಕಾರ್ಯ ಶ್ಲಾಘನೀಯ

Date:

ಕೋಟ, ಜ.28: ಸಮಾಜದ ಬಗ್ಗೆ ಸದಾ ತುಡಿತ ಹೊಂದಿದ ಈಶ್ವರ್ ಮಲ್ಪೆ ತಂಡದ ಸಾಮಾಜಿಕ ಕಾರ್ಯ ನಿಜಕ್ಕೂ ಶ್ಲಾಘನೀಯ. ಸ್ಥಳೀಯವಾಗಿ ಹಲವು ಜನಪರ ಕಾರ್ಯಕ್ರಮಗಳಿಂದ ಪಂಚವರ್ಣ ಸಂಸ್ಥೆ ಎಲ್ಲರಿಗೂ ಮಾದರಿಯಾಗಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ಅನಂತಪದ್ಮನಾಭ ಐತಳ್ ಹೇಳಿದರು. ಮಂಗಳವಾರ ಕೋಟ ಅಮೃತೇಶ್ವರಿ ದೇಗುಲದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಜೀವರಕ್ಷಕ ಟೀಮ್ ಈಶ್ವರ್ ಮಲ್ಪೆ ಇವರ ಆಶ್ರಯದಲ್ಲಿ ನಡೆದ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಸಾಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಜೀವನ್ ಮಿತ್ರ ಸೇವಾ ಟ್ರಸ್ಟ್ ಮುಖ್ಯಸ್ಥ ನಾಗರಾಜ್ ಪುತ್ರನ್, ಟೀಮ್ ಈಶ್ವರ್ ಮಲ್ಪೆ ತಂಡದ ಲವ ಬಂಗೇರ, ವಿಘ್ನಹರ್ತ ಕ್ಲಿನಿಕ್ ಉಡುಪಿ ಇದರ ವೈದ್ಯೆ ಡಾ.ಅಂಕಿತಾ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ನಿಯೋಜಿತ ಅಧ್ಯಕ್ಷ ಮನೋಹರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು. ಉಪಾಧ್ಯಕ್ಷ ದಿನೇಶ್ ಆಚಾರ್ ಸಹರಿಸಿದರು. ಕೋಟ ಅಮೃತೇಶ್ವರಿ ದೇಗುಲ ಸಹಕಾರ ನೀಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!