Wednesday, July 29, 2026
Wednesday, July 29, 2026

ಶ್ರೀ ಕೃಷ್ಣ ಮಠ: ವಿವಿಧ ಕ್ಷೇತ್ರಗಳ ಮುಖ್ಯಸ್ಥರಿಗೆ ಸನ್ಮಾನ

ಶ್ರೀ ಕೃಷ್ಣ ಮಠ: ವಿವಿಧ ಕ್ಷೇತ್ರಗಳ ಮುಖ್ಯಸ್ಥರಿಗೆ ಸನ್ಮಾನ

Date:

ಉಡುಪಿ, ಫೆ.5: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ರಾಜಾಂಗಣದಲ್ಲಿ ನಡೆದ ಮಧ್ವ ನವರಾತ್ರೋತ್ಸವದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಮುಖ್ಯಸ್ಥರನ್ನು ಸನ್ಮಾನಿಸಿದರು. ಶ್ರೀ ಮಧ್ವಾಚಾರ್ಯರು ಸನ್ಯಾಸಾಶ್ರಮ ಸ್ವೀಕಾರದ ಪೂರ್ವದಲ್ಲಿ ಗುರುಗಳಾದ ಶ್ರೀ ಅಚ್ಯುತ ಪ್ರೇಕ್ಷಾಚಾರ್ಯರ ಜೊತೆಯಲ್ಲಿ ಹೋಗಿದ್ದ ಹಾಗೂ ಸನ್ಯಾಸಾಶ್ರಮ ಸ್ವೀಕಾರದ ನಂತರವೂ ಹೋಗಿದ್ದ ಕಾರ್ನೂರು ಮಠದ ಮುಖ್ಯಸ್ಥರಾದ ಶ್ರೀ ರಾಜಭುವನೇಶ ಕಲ್ಲೂರಾಯ . ಕಾರ್ನೂರು ಮಠ, ಮತ್ತು ವಾಕ್ಯಾರ್ಥದಲ್ಲಿ ವಿಜಯರೂಪದಲ್ಲಿ ಪಡೆದ ಮಂಜಿನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನ ದ ಪ್ರಧಾನ ಅರ್ಚಕರಾದ ವಿದ್ವಾನ್ ಜಿ. ವೆಂಕಟೇಶ್ ಭಟ್, ಮತ್ತು ಶ್ರೀ ಮಧ್ವಾಚಾರ್ಯರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮಾರ್ಗದಲ್ಲಿ ಮಧ್ಯಾಹ್ನದ ಪೂಜೆಯನ್ನು ನೆರವೇರಿಸುತ್ತಿದ್ದ ನಡ್ಯಂತಾಡಿ ಮಠದ ಅರ್ಚಕರಾದ ಶ್ರೀ ಗೋಪಾಲಕೃಷ್ಣ ಆಚಾರ್ಯ, ತತ್ವೋದ್ಯೋತ ಗ್ರಂಥವನ್ನು ರಚಿಸಿದ ಕ್ಷೇತ್ರವಾದ ವರ್ಕಾಡಿಯ ಶ್ರೀ ಮಹಾವಿಷ್ಣು ದೇವಸ್ಥಾನ ದ ಪ್ರಧಾನ ಅರ್ಚಕರಾದ ರಾಘವೇಂದ್ರ ಆಚಾರ್ಯ ಹಾಗೂ ಸರ್ವಮೂಲ ಗ್ರಂಥಗಳ (ತಾಮ್ರದ ಹಾಳೆಯಲ್ಲಿ ಬರೆಸಿದ) ಶುದ್ಧಪ್ರತಿಯನ್ನು ಭೂಸ್ಥಾಪನೆಗೊಳಿಸಿದ ಕ್ಷೇತ್ರವಾದ ಕಟ್ತಿಲ ಮಠ ದ ಪ್ರಧಾನ ಅರ್ಚಕರಾದ ಕೃಷ್ಣಪ್ರಸಾದ್ ಭಟ್ ಇವರನ್ನು ಶ್ರೀಪಾದರು ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಪರಮಾನುಗ್ರಹ ರೂಪವಾದ ಪ್ರಸಾದವನ್ನು ನೀಡಿ ಸನ್ಮಾನಿಸಿದರು. ಶ್ರೀ ಪುತ್ತಿಗೆ ಮಠದ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಹಿರಿಯ ವಿದ್ವಾಂಸರಾದ ಪ್ರೊ ವ್ಯಾಸನಕೆರೆ ಪ್ರಭಂಜನಾಚಾರ್ಯ, ದಿವಾನರಾದ ವಿದ್ವಾನ್ ಎಂ ಪ್ರಸನ್ನ ಆಚಾರ್ಯ, ಮಹಿತೋಷ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು. ಡಾ. ಬಿ ಗೋಪಾಲಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!