Saturday, July 25, 2026
Saturday, July 25, 2026

ವಿವೇಕ ಪದವಿಪೂರ್ವ ಕಾಲೇಜು: ಬೀಳ್ಕೊಡುಗೆ ಕಾರ್ಯಕ್ರಮ

ವಿವೇಕ ಪದವಿಪೂರ್ವ ಕಾಲೇಜು: ಬೀಳ್ಕೊಡುಗೆ ಕಾರ್ಯಕ್ರಮ

Date:

ಕೋಟ, ಫೆ.7: ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಸಂಸ್ಕೃತ ಅಧ್ಯಾಪಕರಾಗಿ, ಉಪನ್ಯಾಸಕರಾಗಿ 28 ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಸಿ.ಮಂಜುನಾಥ್ ಉಪಾಧ್ಯ ಇವರನ್ನು ಕೋಟ ವಿದ್ಯಾಸಂಘ ಇದರ ಆಡಳಿತ ಮಂಡಳಿಯಿಂದ ಮತ್ತು ವಿದ್ಯಾ ಸಂಸ್ಥೆಗಳ ಸಿಬ್ಬಂದಿ ವರ್ಗದವರ ಸಂಯುಕ್ತ ಆಶ್ರಯದಲ್ಲಿ ಪುರಸ್ಕರಿಸಿ ವಿದಾಯವನ್ನು ಕೋರಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಅಧ್ಯಕ್ಷರಾದ ಸಿ.ಎ ಪಿ.ಪ್ರಭಾಕರ ಮಯ್ಯ ವಹಿಸಿ ನಿವೃತ್ತರ ಕುರಿತಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವಿದ್ಯಾಸಂಘದ ಕಾರ್ಯದರ್ಶಿ ಎಂ.ರಾಮದೇವ ಐತಾಳ ಹಾಗೂ ಕೋಶಾಧಿಕಾರಿ ವೆಲೇರಿಯನ್ ಮೆನೇಜಸ್ ನಿವೃತ್ತರಿಗೆ ಶುಭ ಹಾರೈಸಿದರು. ಶಿಕ್ಷಕರಾದ ಸಂಜೀವ ಜಿ., ವೆಂಕಟೇಶ ಉಡುಪ, ಮುಖ್ಯೋಪಾಧ್ಯಾಯ ಜಗದೀಶ ಹೊಳ್ಳ ಇವರು ನಿವೃತ್ತರ ಕುರಿತಾಗಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪುರಸ್ಕಾರವನ್ನು ಸ್ವೀಕರಿಸಿ ಮಂಜುನಾಥ ಉಪಾಧ್ಯ ತಮ್ಮ ಸೇವಾ ಅನುಭವವನ್ನು ಹಂಚಿಕೊಂಡರು. ಪ್ರಾಂಶುಪಾಲರಾದ ಜಗದೀಶ ನಾವಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಚೇರಿ ಸಹಾಯಕಿ ಸಹನಾ ಪ್ರಾರ್ಥಿಸಿದರು. ಪ್ರೇಮಾನಂದ ವಂದಿಸಿ, ಚಂದ್ರಶೇಖರ್ ಹೆಚ್ ಎಸ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!