ಉಡುಪಿ, ಫೆ.7: ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮಾಂತರ ಪ್ರದೇಶಗಳಲ್ಲಿನ ರೈತರು ಹರಿಯುವ ನೀರಿನ ತೋಡುಗಳಿಗೆ ಮರದ ಬಳ್ಳಿಗಳು, ಮರದ ಹಲಗೆ ಹಾಗೂ ಮಣ್ಣು ಉಪಯೋಗಿಸಿಕೊಂಡು ಕಟ್ಟ / ಒಡ್ಡುಗಳನ್ನು ನಿರ್ಮಾಣ ಮಾಡಿ ಹರಿಯುವ ನೀರನ್ನು ತಡೆಗಟ್ಟಿ ಕೃಷಿಗೆ ಉಪಯೋಗ ಮಾಡುತ್ತಿದ್ದರು. ಅಂತಹದೇ ಕ್ರಮಗಳನ್ನು ಅನುಸರಿಸಿ, ನೀರು ಶೇಖರಣೆ ಮಾಡುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಲು ಸಹಕಾರಿಯಾಗುತ್ತದೆ. ಆದ್ದರಿಂದ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಟ್ಟ / ಒಡ್ಡುಗಳನ್ನು ನಿರ್ಮಾಣ ಮಾಡಲು ಹೆಚ್ಚಿನ ಒತ್ತು ನೀಡುವಂತೆ ಹಾಗೂ ಮಾಹಿತಿಗಾಗಿ ಶುಲ್ಕ ರಹಿತ ಟೋಲ್ ಫ್ರೀ ನಂಬರ್ 1077, ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟ್ಟ/ ಒಡ್ಡುಗಳ ನಿರ್ಮಾಣಕ್ಕೆ ಒತ್ತು ನೀಡಿ
ಕಟ್ಟ/ ಒಡ್ಡುಗಳ ನಿರ್ಮಾಣಕ್ಕೆ ಒತ್ತು ನೀಡಿ
Date:




By
ForthFocus™