Monday, February 24, 2025
Monday, February 24, 2025

ದಂಪತಿ.ಕಾಮ್ ಉಚಿತ ನೋಂದಣಿ ಕಚೇರಿ ಉದ್ಘಾಟನೆ

ದಂಪತಿ.ಕಾಮ್ ಉಚಿತ ನೋಂದಣಿ ಕಚೇರಿ ಉದ್ಘಾಟನೆ

Date:

ಉಡುಪಿ, ಫೆ.13: ಭಾರತ, ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಇತ್ಯಾದಿ ದೇಶಗಳಲ್ಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಶಾಖೆಗಳ ವಿಸ್ತೃತ ಸೇವಾಪ್ರಕಲ್ಪ ಜಾಗತಿಕ ಹಿಂದೂ ವಿವಾಹ ವೇದಿಕೆ ದಂಪತಿ.ಕಾಮ್‌ಗೆ ಉಚಿತ ನೋಂದಣಿ ಕಚೇರಿಯನ್ನು ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ತಮ್ಮ ಪರಮಗುರುಗಳಾದ ಮಹಾತಪಸ್ವಿ ಶತಾಯುಷಿ ಶ್ರೀ ಸುಧೀಂದ್ರತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಪರ್ವಕಾಲದಲ್ಲಿ ಉದ್ಘಾಟಿಸಿದರು.

ಉಡುಪಿ ಶ್ರೀಕೃಷ್ಣ ಮಠದ ಸಮೀಪವಿರುವ ಗೀತಾಮಂದಿರದ ಮುಂಭಾಗದಲ್ಲಿ ರಾಜಾಂಗಣಕ್ಕೆ ತಾಗಿಕೊಂಡಂತೆ ಇರುವ ನೂತನ ಕಚೇರಿಯಲ್ಲಿ ದೀಪ ಉರಿಸಿ ಶ್ರೀನಿವಾಸ-ಪದ್ಮಾವತಿಯರ ವಿಗ್ರಹಕ್ಕೆ ಆರತಿ ಬೆಳಗಿ ಆಶೀರ್ವಚನಗೈದರು. ಸನಾತನ ಹಿಂದೂ ಧರ್ಮದ ಉಳಿವಿಗಾಗಿ ಸಮಾನ ಸಂಸ್ಕೃತಿಯ ವಿವಾಹಗಳು ಈ ಕಾಲದ ತುರ್ತು ಅಗತ್ಯವಾಗಿದ್ದು ಇದಕ್ಕಾಗಿಯೇ ದಂಪತಿ.ಕಾಮ್ ಕಾರ್ಯತತ್ಪರವಾಗಿದೆ. ನೂತನ ವಧೂವರರ ಜಾಗತಿಕ ಮೇಳಾಮೇಳಿಗಾಗಿ ವಿನೂತನ ತಂತ್ರಜ್ಞಾನೀ ಮಾಧ್ಯಮವನ್ನು ಅಳವಡಿಸಿಕೊಂಡ ಈ ಉಚಿತ ಸೌಲಭ್ಯವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಪಾದರ ಆಪ್ತ ಕಾರ್ಯದರ್ಶಿ ರತೀಶ್ ತಂತ್ರಿ, ದಂಪತಿ.ಕಾಮ್‌ನ ಅಖಿಲ ಭಾರತ ಸಂಚಾಲಕ ಕೆ. ವಿ. ರಮಣಾಚಾರ್ಯ, ತಾಂತ್ರಿಕ ವಿಭಾಗದ ರಾಮಪ್ರಿಯ, ನಿರ್ವಾಹಕ ಬಳಗದ ವಿಕ್ರಂ ಕುಂಟಾರ್, ರವೀಂದ್ರ, ಅಂತರ್ಯಾಮಿಯ ಪ್ರಮೋದ್, ಶ್ರೀನಿವಾಸ್ ರಾವ್, ಸಾಂಸ್ಕೃತಿಕ ಸಮಿತಿಯ ಪ್ರಮುಖ ರಮೇಶ್ ಭಟ್, ಸುಗುಣಮಾಲಾ ಸಂಪಾದಕ ಮಹಿತೋಷ ಆಚಾರ್ಯ, ಕಚೇರಿ ಸಿಬ್ಬಂದಿ ಸುಷ್ಮಿತಾ, ಅಕ್ಷಯ ಮತ್ತಿತರರು ಉಪಸ್ಥಿತರಿದ್ದರು.

ಕಚೇರಿಯು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ತೆರೆದಿರಲಿದ್ದು ಆಸಕ್ತ ಹಿಂದೂ ವಿವಾಹಾಪೇಕ್ಷಿಗಳು ಉಚಿತ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!