ಇಂದ್ರಾಳಿ, ಫೆ.14: ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
ನಳಿಕ ಮಾತನಾಡಿದ ಅವರು, ಕೊರಗ ಸಮುದಾಯದ ಆಶೋತ್ತರಗಳ ಈಡೇರಿಕೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಸಮುದಾಯ ಭವನಕ್ಕೆ 1 ಕೋಟಿ ಅನುದಾನ ಮಂಜೂರು ಮಾಡಿ ಶಿಲಾನ್ಯಾಸ ನೆರವೇರಿಸಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ಸಮುದಾಯದ ಆಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಈ ಸಮುದಾಯ ಭವನ ಸದುಪಯೋಗವಾಗಲಿ ಎಂದರು.
ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಬಾಲಕೃಷ್ಣ ಶೆಟ್ಟಿ, ಸುಮಿತ್ರಾ ನಾಯಕ್, ಗಿರಿಧರ ಆಚಾರ್ಯ, ಹರೀಶ್ ಶೆಟ್ಟಿ, ಕಲ್ಪನಾ ಸುಧಾಮ, ಮುಂತಾದವರು ಉಪಸ್ಥಿತರಿದ್ದರು.