Saturday, January 17, 2026
Saturday, January 17, 2026

ಶ್ರೀ ರಾಮ ದೇಗುಲದ ಪ್ರತಿಷ್ಠಾ ವರ್ಧಂತಿ

ಶ್ರೀ ರಾಮ ದೇಗುಲದ ಪ್ರತಿಷ್ಠಾ ವರ್ಧಂತಿ

Date:

ಬ್ರಹ್ಮಾವರ, ಫೆ.15: ಕೋಡಿ ಕನ್ಯಾಣ ಇಲ್ಲಿನ ಶ್ರೀ ರಾಮ ದೇಗುಲದ 15ನೇ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ, 31ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಶುಕ್ರವಾರ ಜರಗಿತು. ಈ ಪ್ರಯುಕ್ತ ಪೂರ್ವಾಹ್ನ 109 ಕಲಶ ಸ್ಥಾಪನೆ, ಅಧಿವಾಸ ಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಕಲಶಾಭಿಷೇಕ ಮಹಾಪೂಜೆ, ಮಹಾಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಸ್ಥಳೀಯ ಶಾಲಾ ವಿದ್ಯಾರ್ಧಿಗಳಿಂದ, ಸಾಂಸ್ಕೃತಿಕ ಕಾರ್ಯಕ್ರಮ, ಆಕಾಶವಾಣಿ ಕಲಾವಿದ ತಿಮ್ಮಪ್ಪ ಕರ್ಕೇರ ಬಳಗದಿಂದ ಭಕ್ತಿಸಂಗೀತ, ವಿವಿಧ ಭಜನಾ ತಂಡಗಳಿಂದ ಭಜನೆ, ಶಿಶುಮಂದಿರದ ಪುಟಾಣಿಗಳಿಂದ ನೃತ್ಯ ವೈವಿಧ್ಯ, ಪ್ರತಿಭಾ ಪುರಸ್ಕಾರ, ಚೈತನ್ಯ ಕಲಾವಿದರು ಕಾರ್ಕಳ ಬೈಲೂರು ಇವರಿಂದ ಅಷ್ಟಮಿ ನಾಟಕ ಪ್ರದರ್ಶನ ನಡೆಯಿತು.

ವೇ.ಮೂ ಪಾಂಡೇಶ್ವರ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇಗುಲದ ಅಧ್ಯಕ್ಷ ರಾಘವೇಂದ್ರ ಕರ್ಕೇರ, ಉಪಾಧ್ಯಕ್ಷರಾದ ರಾಜು ಕರ್ಕೇರ, ಸತೀಶ್ ಜಿ.ಕುಂದರ್, ಪ್ರಧಾನ ಕಾರ್ಯದರ್ಶಿ ಅಶೋಕ್ ಸಾಲಿಯಾನ್, ಜತೆ ಕಾರ್ಯದರ್ಶಿ ವಿಜಯ ಮಾಸ್ತರ್, ಮಹೇಶ್ ತಿಂಗಳಾಯ, ಕೋಶಾಧಿಕಾರಿ ಜಯಕುಮಾರ್ ಎ.ಎಸ್., ದೇಗುಲದ ಅರ್ಚಕ ಭಾಸ್ಕರ್ ಬಾಯರಿ, ಸಹಾಯಕ ಅರ್ಚಕ ರಾಮದಾಸ ಸಾಲಿಯಾನ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!