Saturday, March 21, 2026
Saturday, March 21, 2026

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಫೆ.15: ಲೋಕಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಸಂಘಟಕರು ಆಯೋಜಿಸಿದ್ದಾರೆ. ಇದೊಂದು ಪುಣ್ಯದ ಕಾರ್ಯಕ್ರಮವಾಗಿದ್ದು ಈ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಿ ಎಂದು ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲದ ಮುಖ್ಯಸ್ಥ ಸುಬ್ರಹ್ಮಣ್ಯ ಮಧ್ಯಸ್ಥ ಹೇಳಿದರು. ಶುಕ್ರವಾರ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ ಶ್ರೀನಿವಾಸ ಕಲ್ಯಾಣೋತ್ಸವ ಕಛೇರಿಯಲ್ಲಿ ಏಪ್ರಿಲ್ 1 ರಿಂದ 3ರವರೆಗೆ ನಡೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಆಮಂತ್ರಣ ಪತ್ರಿಕೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಗಣೇಶ್ ಭಟ್ ಬಿಡುಗಡೆಗೊಳಿಸಿದರು.

ಕಾರ್ತಿಕೇಯ ಎಸ್ಟೇಟ್ ಮಾಲಿಕರಾದ ಸುರೇಶ್ ಬೆಟ್ಟಿನ್, ಚಂದ್ರಶೇಖರ್ ಧನ್ಯ, ಅಘೋರೇಶ್ವರ ದೇಗುಲದ ಧರ್ಮದರ್ಶಿ ಚಂದ್ರಶೇಖರ್ ಕಾರಂತ್, ಗೋಳಿಗರಡಿ ದೈವಸ್ಥಾನದ ಅಧ್ಯಕ್ಷ ಜಿ.ವಿಠ್ಠಲ್ ಪೂಜಾರಿ ಪಾಂಡೇಶ್ವರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಮೇಶ್ ಪಿ.ಕೆ., ಸಾಲಿಗ್ರಾಮ ದೇಗುಲದ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್, ಸಮಿತಿಯ ಪ್ರಮುಖರಾದ ಲೀಲಾವತಿ ಗಂಗಾಧರ, ವೇ.ಮೂ ಪ್ರಸನ್ನ ತುಂಗ, ರಘು ಮಧ್ಯಸ್ಥ, ಸುಬ್ರಾಯ ಆಚಾರ್ ಮುಂತಾದವರು ಉಪಸ್ಥಿತರಿದ್ದರು. ಕಲ್ಯಾಣೋತ್ಸವದ ಮಾರ್ಗದರ್ಶಕ ಡಾ.ವಿದ್ವಾನ್ ವಿಜಯ್ ಮಂಜರ್ ಕಲ್ಯಾಣೋತ್ಸವದ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಸ್ವಾಗತಿಸಿ ಪರಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...

ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಲೋಕಾರ್ಪಣೆ

ಉಡುಪಿ, ಮಾ;.21: ಸುಮಾರು 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಯಾಣಪುರ ಗ್ರಾಮ...

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!