Sunday, February 23, 2025
Sunday, February 23, 2025

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ತ್ಯಾಜ್ಯದ ಮೂಟೆ; ಸಾರ್ವಜನಿಕರ ಆಕ್ರೋಶ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ತ್ಯಾಜ್ಯದ ಮೂಟೆ; ಸಾರ್ವಜನಿಕರ ಆಕ್ರೋಶ

Date:

ಕೋಟ, ಫೆ.18: ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಿಡಿಗೇಡಿಗಳು ಮೂಟೆಗಟ್ಟಲೆ ತ್ಯಾಜ್ಯ ಎಸೆದ ಘಟನೆ ನಡೆದಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ಮಂಗಳವಾರ ಮುಂಜಾನೆಯ ಒಳಗೆ ಮತ್ತೆ ಮೂರು ಭಾರೀ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೋಟದ ಪಂಚವರ್ಣ ಸಂಘಟನೆ ಅಧ್ಯಕ್ಷ ಮನೋಹರ್ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸುತ್ತಿರುವ ಕೆ.ಕೆ ಆರ್ ಕಂಪನಿ ಹಾಗೂ ಕೋಟ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ. ಹೆದ್ದಾರಿಯ ಮಧ್ಯದಲ್ಲಿ ತ್ಯಾಜ್ಯದ ಚೀಲ ಇರಿಸುವ ಕಿಡಿಗೇಡಿಗಳನ್ನು ಕಂಡುಹಿಡಿಯಲು ಸಿಸಿ ಕ್ಯಾಮರ ಅಳವಡಿಸಲು ಸಂಬಂಧಪಟ್ಟ ಸ್ಥಳೀಯಾಡಳಿತ ಅಥವಾ ಕೆ.ಕೆ ಆರ್ ಕಂಪನಿಗೆ ಸ್ಥಳೀಯರು ಮತ್ತು ಸಂಘ ಸಂಸ್ಥೆಗಳು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!