Saturday, February 7, 2026
Saturday, February 7, 2026

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ತ್ಯಾಜ್ಯದ ಮೂಟೆ; ಸಾರ್ವಜನಿಕರ ಆಕ್ರೋಶ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ತ್ಯಾಜ್ಯದ ಮೂಟೆ; ಸಾರ್ವಜನಿಕರ ಆಕ್ರೋಶ

Date:

ಕೋಟ, ಫೆ.18: ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಿಡಿಗೇಡಿಗಳು ಮೂಟೆಗಟ್ಟಲೆ ತ್ಯಾಜ್ಯ ಎಸೆದ ಘಟನೆ ನಡೆದಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ಮಂಗಳವಾರ ಮುಂಜಾನೆಯ ಒಳಗೆ ಮತ್ತೆ ಮೂರು ಭಾರೀ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೋಟದ ಪಂಚವರ್ಣ ಸಂಘಟನೆ ಅಧ್ಯಕ್ಷ ಮನೋಹರ್ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸುತ್ತಿರುವ ಕೆ.ಕೆ ಆರ್ ಕಂಪನಿ ಹಾಗೂ ಕೋಟ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ. ಹೆದ್ದಾರಿಯ ಮಧ್ಯದಲ್ಲಿ ತ್ಯಾಜ್ಯದ ಚೀಲ ಇರಿಸುವ ಕಿಡಿಗೇಡಿಗಳನ್ನು ಕಂಡುಹಿಡಿಯಲು ಸಿಸಿ ಕ್ಯಾಮರ ಅಳವಡಿಸಲು ಸಂಬಂಧಪಟ್ಟ ಸ್ಥಳೀಯಾಡಳಿತ ಅಥವಾ ಕೆ.ಕೆ ಆರ್ ಕಂಪನಿಗೆ ಸ್ಥಳೀಯರು ಮತ್ತು ಸಂಘ ಸಂಸ್ಥೆಗಳು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!