Friday, February 21, 2025
Friday, February 21, 2025

ವೈದ್ಯಾಧಿಕಾರಿಗಳಿಗೆ ತಾಯಿ ಹಾಗೂ ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ

ವೈದ್ಯಾಧಿಕಾರಿಗಳಿಗೆ ತಾಯಿ ಹಾಗೂ ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ

Date:

ಉಡುಪಿ, ಫೆ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಇಂದು ನಗರದ ಮಣಿಪಾಲ ಕೆ.ಎಂ.ಸಿ.ಯ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಹಾಗೂ ಮಕ್ಕಳ ಸಾವುಗಳು ಅತ್ಯಲ್ಪವಿದ್ದು, ಪ್ರತೀ ತಾಯಿ ಹಾಗೂ ಮಗುವಿನ ಸಾವುಗಳನ್ನು ತಡೆಯಲು ಸರ್ವ ಪ್ರಯತ್ನಗಳನ್ನು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಮಾಡಬೇಕು. ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ಸ್ವಾಭಾವಿಕವಾಗಿ ಆಗುವ ರೀತಿ ಒತ್ತು ನೀಡಬೇಕು. ಒಂದೊಮ್ಮೆ ಅನಿವಾರ್ಯ ತುರ್ತು ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಮಾಡುವ ಮೂಲಕ ಡೆಲಿವರಿ ಮಾಡಿಸಬೇಕು ಎಂದರು. ಹದಿಹರೆಯದ ಯುವ ಹೆಣ್ಣು ಮಕ್ಕಳಿಗೆ ಪೌಷ್ಠಿಕ ಆಹಾರ ಸೇವನೆ ಸೇರಿದಂತೆ ಸದೃಢ ಆರೋಗ್ಯ ಹೊಂದಲು ತೆಗೆದುಕೊಳ್ಳಬೇಕಾದ ಮಾರ್ಗೋಪಾಯಗಳನ್ನು ಸಹ ಅವರುಗಳಿಗೆ ಮಾಹಿತಿ ನೀಡಬೇಕು ಎಂದ ಅವರು, ಹೆರಿಗೆಗೂ ಮುನ್ನ ಹೆಣ್ಣು ಮಕ್ಕಳಿಗೆ ಆಗಿಂದಾಗ್ಗೆ ಆರೋಗ್ಯ ತಪಾಸಣೆಗಳನ್ನು ನಿಯಮಿತವಾಗಿ ಮಾಡುವುದರೊಂದಿಗೆ ಆರೋಗ್ಯ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲೆಯ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಪ್ರತೀ ಜಿಲ್ಲೆಯಲ್ಲಿ ನಡೆಯುತ್ತಿರುವ ಸಿಸೇರಿಯನ್ ಡೆಲಿವರಿಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ನೈಜ ಅಗತ್ಯಗಳ ಬಗ್ಗೆ ಹೆಚ್ಚು ತಿಳುವಳಿಕೆ ನೀಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ ಉಪ ಕುಲಪತಿ ಡಾ. ಶರತ್ ಕೆ. ರಾವ್ ಮಾತನಾಡಿ, ಜಿಲ್ಲೆಯಲ್ಲಿ ಕಸ್ತೂರ್ಬಾ ಸಮೂಹ ಆಸ್ಪತ್ರೆಗಳು ಹಾಗೂ ಸಂಸ್ಥೆಯು ಗ್ರಾಮೀಣ ಆರೋಗ್ಯ ಕೇಂದ್ರಗಳ ಮೂಲಕ ತಾಯಿ ಮಕ್ಕಳ ಮರಣ ಪ್ರಮಾಣ ತಡೆಯಲು ನೀಡುತ್ತಿರುವ ನಿರಂತರ ಸಹಕಾರಗಳ ಬಗ್ಗೆ ವಿವರಿಸಿದರು. ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರತ್ನ, ಮಣಿಪಾಲ ಕೆ.ಎಂ.ಸಿ. ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕರ್ನಾಟಕ ವೈದ್ಯಕೀಯ ಪರಿಷತ್ತಿನ ವೀಕ್ಷಕ ಡಾ. ಪ್ರೇಮಾನಂದ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್, ತಜ್ಞ ವೈದ್ಯರು, ಖಾಸಗಿ, ಸರಕಾರಿ ವೈದ್ಯರುಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಕೆ.ಎಂ.ಸಿ. ಮಣಿಪಾಲದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ. ಕೆ ಸ್ವಾಗತಿಸಿ, ಡಾ. ರಕ್ಷಿತಾ ಆರ್. ಶೆಣೈ ನಿರೂಪಿಸಿ, ಸಹ ಪ್ರಾಧ್ಯಾಪಕಿ ಡಾ. ಈಶ್ವರೀ ಕೆ. ವಂದಿಸಿದರು. ಕಸ್ತೂರ್ಬಾ ಆಸ್ಪತ್ರೆಯ 10 ಜನ ತಜ್ಞ ವೈದ್ಯರು ಹೆರಿಗೆ ಸಮಯದಲ್ಲಿ ಮಹಿಳೆ ಹಾಗೂ ಮಗುವಿನ ಆರೋಗ್ಯದಲ್ಲಾಗಬಹುದಾದ ಕ್ಲಿಷ್ಟಕರ ಸಂದರ್ಭಗಳ ನಿರ್ವಹಣೆ ಹಾಗೂ ಅವರ ಆರೋಗ್ಯ ರಕ್ಷಣೆ, ಸುಧಾರಣೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ್ದರು: ಪ್ರಭಾಕರ ಪೂಜಾರಿ

ಉಡುಪಿ, ಫೆ.21: ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು...

ಫೆ.23: ವಿಶ್ವಪ್ರಭಾ ಪುರಸ್ಕಾರ -2025 ಹಾಗೂ ನಾಟಕ

ಉಡುಪಿ, ಫೆ.20: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇದರಿಂದ ಪ್ರತಿಷ್ಠಿತ...

ಹೃದಯಜ್ಯೋತಿ ಯೋಜನೆ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು, ಫೆ‌.20: ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ...

ರಸ್ತೆ ಅಪಘಾತಗೊಂಡು, ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಇತರರಿಗೆ ಜೀವದ ಸಾರ್ಥಕತೆ

ಮಣಿಪಾಲ, ಫೆ.20: ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ 35 ವರ್ಷದ ರಾಘವೇಂದ್ರ...
error: Content is protected !!