Saturday, February 22, 2025
Saturday, February 22, 2025

ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ್ದರು: ಪ್ರಭಾಕರ ಪೂಜಾರಿ

ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ್ದರು: ಪ್ರಭಾಕರ ಪೂಜಾರಿ

Date:

ಉಡುಪಿ, ಫೆ.21: ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾರಿದರು ಎಂದು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು. ಅವರು ನಗರದ ಕಡಿಯಾಳಿಯ ಯು.ಕಮಲಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಸರ್ವಜ್ಙರ ವಚನಗಳು ಅರ್ಥಪೂರ್ಣವಾಗಿದ್ದು, ಪ್ರತಿಯೊಬ್ಬರು ಅವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು ಸಮಾಜದಲ್ಲಿನ ಮೂಡನಂಬಿಕೆ ಜಾತಿ ವ್ಯವಸ್ಥೆ ಡಾಂಬಿಕ ಭಕ್ತಿಯನ್ನು ಕಟ್ಟುವಾಗಿ ಅವರು ಖಂಡಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ದೇಶದ ಏಳಿಗೆಯಲ್ಲಿ ದಾರ್ಶನಿಕರು, ಸಾಹಿತಿಗಳು ಹಾಗೂ ಕವಿಗಳ ಸೇವೆ ಅಪಾರವಾಗಿದ್ದು, ಅವರ ಸಾಧನೆಗಳನ್ನು ತಿಳಿದುಕೊಂಡು ಅವರ ಧ್ಯೇಯೋದ್ದೇಶಗಳನ್ನು ನಮ್ಮ ಜೀವನದಲ್ಲಿ ಅನುಸರಿಸಬೇಕು. ಸಮಾಜಕ್ಕೆ ನಾಡಿಗೆ ಉತ್ತಮ ಕೊಡುಗೆ ನೀಡುವಲ್ಲಿ ಅವರು ನೀಡುವ ಪ್ರೇರಣೆ ನಮ್ಮ ಬದುಕಿನ ಸಾಧನೆಗೆ ಹೊಸ ಮುನ್ನುಡಿಯಾಗಲಿ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಶೇಖರ ಕುಲಾಲ್ ಉಪನ್ಯಾಸ ನೀಡಿ ಮಾತನಾಡಿ, ತ್ರಿಪದಿಯ ಬ್ರಹ್ಮ ಎಂದು ಕರೆಯಲ್ಪಡುವ ಸರ್ವಜ್ಙರು, ತ್ರಿಪದಿಗಳ ಮೂಲಕ ಬದುಕಿನ ಮೌಲ್ಯಗಳನ್ನು ಸರಳವಾಗಿ ಜನರಿಗೆ ಬೋಧಿಸಿದರು, ಸಮಾಜದಲ್ಲಿನ ಜಾತಿ ಪದ್ದತಿಯನ್ನು ವಿರೋಧಿಸಿದ ಅವರು, ತಮ್ಮ ವಚನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಧನ್ಯತೆ ನೀಡುವುದರ ಜೊತೆಗೆ ದಾನಗಳ ಮಹತ್ವವನ್ನು ಜನರಿಗೆ ಮನದಟ್ಟು ಮಾಡುವಲ್ಲಿ ಶ್ರಮಿಸಿದರು ಎಂದರು. ಕುಲಾಲ ಸಂಘದ ಅಧ್ಯಕ್ಷ ಕಾಳು ಕುಲಾಲ್ ಕವಿ ಸರ್ವಜ್ಙರ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಗಣಪತಿ, ಸರಕಾರದ ಗ್ಯಾರಂಟಿ ಯೋಜನೆಯ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಲಾಲ್, ಕುಲಾಲ್ ಸಮುದಾಯದ ಪದಾಧಿಕಾರಿಗಳು, ಶಾಲೆಯ ಬೋಧಕ ಹಾಗೂ ಬೋಧಕೇತರ ವರ್ಗ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ತೇಜಸ್ ವಿ.ಬಂಗೇರ ನಿರೂಪಿಸಿದರು. ಕಡಿಯಾಳಿ ಯು. ಕಮಲಬಾಯಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸುದರ್ಶನ್ ನಾಯಕ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!