ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ವರ್ಧಂತಿ ಉತ್ಸವದ ಅಂಗವಾಗಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ೨೪೩ನೇ ಭಾನುವಾರ ಪರಿಸರ ಸ್ನೇಹಿ ಕಾರ್ಯಕ್ರಮದ ಪ್ರಯುಕ್ತ ದೇಗುಲದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಹಾಗೂ ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇವರುಗಳನ್ನು ಗೌರವಿಸಿದರು.
ದೇಗುಲದ ಆಡಳಿತ ಮಂಡಳಿಯ ಕಾರ್ಯದರ್ಶಿ ಹರೀಶ್ ದೇವಾಡಿಗ, ಪಂಚವರ್ಣದ ಉಪಾಧ್ಯಕ್ಷ ದಿನೇಶ್ ಆಚಾರ್, ಸಂತೋಷ್ ಪೂಜಾರಿ, ಸಂಚಾಲಕ ಅಮೃತ್ ಜೋಗಿ, ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ತಿಮ್ಮ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.