Sunday, July 26, 2026
Sunday, July 26, 2026

ಪಂಚವರ್ಣ ಸ್ವಚ್ಛತಾ ಕಾರ್ಯ

ಪಂಚವರ್ಣ ಸ್ವಚ್ಛತಾ ಕಾರ್ಯ

Date:

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ವರ್ಧಂತಿ ಉತ್ಸವದ ಅಂಗವಾಗಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ೨೪೩ನೇ ಭಾನುವಾರ ಪರಿಸರ ಸ್ನೇಹಿ ಕಾರ್ಯಕ್ರಮದ ಪ್ರಯುಕ್ತ ದೇಗುಲದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಹಾಗೂ ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇವರುಗಳನ್ನು ಗೌರವಿಸಿದರು.

ದೇಗುಲದ ಆಡಳಿತ ಮಂಡಳಿಯ ಕಾರ್ಯದರ್ಶಿ ಹರೀಶ್ ದೇವಾಡಿಗ, ಪಂಚವರ್ಣದ ಉಪಾಧ್ಯಕ್ಷ ದಿನೇಶ್ ಆಚಾರ್, ಸಂತೋಷ್ ಪೂಜಾರಿ, ಸಂಚಾಲಕ ಅಮೃತ್ ಜೋಗಿ, ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ತಿಮ್ಮ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!