ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಎದುರಿಸುವ ಕುರಿತು ತರಬೇತಿ ಕಾರ್ಯಕ್ರಮ ಶಂಕರನಾರಾಯಣ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಜೆಸಿಐ ಶಂಕರನಾರಾಯಣ ಅಧ್ಯಕ್ಷರಾದ ಪ್ರವೀಣ್ ಬಾಳೆಕೊಡ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರೌಢಶಾಲೆ ಸಿದ್ದಾಪುರದ ಶಿಕ್ಷಕ ಹಾಗೂ ಜೆಸಿಐ ಶಂಕರನಾರಾಯಣದ ಪೂರ್ವಾಧ್ಯಕ್ಷ ರಾಘವೇಂದ್ರ ಚಾತ್ರಮಕ್ಕಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ತರಬೇತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣದ ಉಪಪ್ರಾಂಶುಪಾಲರಾದ ಮೋಹನ್ ರಾವ್ ಉಪಸ್ಥಿತರಿದ್ದು ವೇದಿಕೆಯಲ್ಲಿ ಲೇಡಿ ಜೆ.ಸಿ ಅಧ್ಯಕ್ಷೆ ಪಲ್ಲವಿ ಪ್ರವೀಣ್ ಬಾಳೆಕೊಡ್ಲು, ಕಾರ್ಯಕ್ರಮ ನಿರ್ದೇಶಕರಾದ ವಿನಯ್ ದೇವಾಡಿಗ, ಕಾರ್ಯದರ್ಶಿ ಯೋಗೀಶ್ ದೇವಾಡಿಗ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಕೃಷ್ಣ ಡಿ. ಎಸ್., ಉದಯ ರಾಯ್ಕರ್, ರಾಮನಾಥ ಶೆಣೈ, ಬಾಬಿ, ಅಂಬಿಕಾ, ಶ್ರೀಕಲಾ, ರಂಜಿತ್ ಬೋಳಾರ್, ಸಿಬ್ಬಂದಿಯವರು ಜೆಸಿಐ ಪೂರ್ವಾಧ್ಯಕ್ಷ ಹೆಬ್ಬಾಡಿ ರಾಘವೇಂದ್ರ ಶೆಟ್ಟಿ, ಜೆಸಿಐ ಜೊತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಆರೂರ್ ಉಪಸ್ಥಿತರಿದ್ದರು.
ಪರೀಕ್ಷಾ ತರಬೇತಿ
ಪರೀಕ್ಷಾ ತರಬೇತಿ
Date:




By
ForthFocus™