Saturday, February 7, 2026
Saturday, February 7, 2026

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

Date:

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆಯಾಗಿದ್ದಾರೆ. ಕೇಂದ್ರೀಯ ಮಂಡಳಿ ಕಾರ್ಯಕಾರಿಣಿ ಸಭೆಯಲ್ಲಿ ಸ್ಥಾಪಕ ಬಾಲಕೃಷ್ಣ ರೈ ಕೆ., ಜನರಲ್ ಸೆಕ್ರೆಟರಿ ಡಾ. ಕೇಶವ್ಎಸ್., ಸಿಇಓ ಶಿವರಾಜು ಬಿ ಐಯಾರ್ ಇವರ ಉಪಸ್ಥಿತಿಯಲ್ಲಿ ಮಂಗಳೂರಿನ ಕೆನರಾ ಕ್ಲಬ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

ಉದಯ ನಾಯ್ಕ್ ಇವರು ಜೆಸಿಐ ಇಂಡಿಯಾದ ವಲಯ ತರಬೇತುದರಾಗಿ, ಎಚ್. ಆರ್. ಎಫ್. ಐ ನಲ್ಲಿ ನಿರ್ದೇಶಕ, ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಕಳೆದ ವರ್ಷ ಉಪಾಧ್ಯಕ್ಷರಾಗಿ 13 ವರ್ಷಗಳ ಅನುಭವದಿಂದ ಹಲವಾರು ಮಾನವ ಹಕ್ಕುಗಳ ಕ್ಷೇತ್ರದಲ್ಲಿ, ಸಾಮಾಜಿಕ ಕಾರ್ಯಕ್ರಮಗಳು, ಶಾಲಾ- ಕಾಲೇಜು ಹಾಗೂ ಹಲವಾರು ಸಂಸ್ಥೆಗಳಲ್ಲಿ ಸಾಮಾಜಿಕ ಅರಿವು ಮೂಡಿಸುವ ತರಬೇತಿಗಳು, ಸ್ವಚ್ಛತಾ ಅಭಿಯಾನ, ರಕ್ತದಾನ ದ ಅರಿವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂಘಟಿಸಿದ್ದಾರೆ. ಇವರು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಉಡುಪಿ ವಲಯದ ಛಾಯಾಗ್ರಾಹಕರು. ಇವರಿಗೆ 2014ರಲ್ಲಿ ಮಾನವ ಹಕ್ಕುಗಳ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ನ್ಯಾಯಾಧೀಶ ಸಿ. ಜೆ ಹುನಗುಂದ ಹಾಗೂ ವಿಲೇಖಾನಾಧಿಕಾರಿಯವರು ಹ್ಯೂಮನ್ ರೈಟ್ಸ್ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಉಡುಪಿಯ ನಿಕಟಪೂರ್ವ ಹೆಚ್ ಆರ್ ಎಫ್ ಐ ಅಧ್ಯಕ್ಷರಾದ ಅಡ್ವಕೇಟ್ ಪ್ರೀತಿ ವೈ, ಮತ್ತು ವಿವಿಧ ಜಿಲ್ಲೆಗಳ ನಿರ್ದೇಶಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!