Sunday, July 26, 2026
Sunday, July 26, 2026

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

Date:

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

ಅರವಿಂದ ಕುಲಕರ್ಣಿ ಧಾರವಾಡ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ್ ಕಾರಂತ್ ಬೈಂದೂರು (ರಂಗ ಸಂಘಟಕ ಹಾಗೂ ನಿರ್ದೇಶಕ), ಪ್ರಿಯಾ ಸರೋಜಾದೇವಿ ಮುಂಬೈ (ರಂಗನಟಿ ಹಾಗೂ ಕಂಠದಾನ ಕಲಾವಿದೆ), ಪ್ರಕಾಶ್ ಜಿ. ಕೊಡವೂರು (ರಂಗನಟ ಹಾಗೂ ಸಂಘಟಕ), ಮಂಜುಳಾ ಜನಾರ್ದನ್ ಮಂಗಳೂರು (ರಂಗನಟಿ) ಇವರಿಗೆ ಮಾರ್ಚ್ 26 ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ-2025 ಪ್ರದಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!