Wednesday, July 29, 2026
Wednesday, July 29, 2026

ಸೇವಾ ಮನೋಭಾವ ಇಂದಿನ ಅಗತ್ಯ: ಗುರುರಾಜ ಶೆಟ್ಟಿ ಗಂಟಿಹೊಳೆ

ಸೇವಾ ಮನೋಭಾವ ಇಂದಿನ ಅಗತ್ಯ: ಗುರುರಾಜ ಶೆಟ್ಟಿ ಗಂಟಿಹೊಳೆ

Date:

ಕೊಲ್ಲೂರು, ಮಾ.2: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ಸಕಾರಾತ್ಮಕ ಮತ್ತು ಸಮಗ್ರವಾಗಿ ರೂಪುಗೊಳ್ಳುತ್ತದೆ. ಶಿಸ್ತುಬದ್ಧವಾದ ಜೀವನ ಮತ್ತು ಸೇವಾ ಮನೋಭಾವನೆಯು ನಾಯಕತ್ವದ ಗುಣಗಳ ಬೆಳೆವಣಿಗೆಗೆ ಕಾರಣವಾಗುತ್ತದೆ. ಅಂತಹ ವ್ಯಕ್ತಿತ್ವ ವಿಕಸನದ ಹಾದಿಯೇ ರಾಷ್ಟ್ರೀಯ ಸೇವಾ ಯೋಜನೆಯ ಗುರಿ. ಸ್ವಾರ್ಥಗುಣ ತೊಲಗಿಸಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಅಗತ್ಯ ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ “ಭಾರತಕ್ಕಾಗಿ ಯುವಕರು-ಡಿಜಿಟಲ್ ಸಾಕ್ಷರತೆಗಾಗಿ ಯುವಕರು” ವಾರ್ಷಿಕ ವಿಶೇಷ ಶಿಬಿರವನ್ನು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪರಿಸರದಲ್ಲಿ ಉದ್ಘಾಟಿಸಿ ಮಾತನಾಡಿದರು. ತಾವು ವಿದ್ಯಾರ್ಥಿಯಾಗಿ ಎನ್.ಸಿ.ಸಿ ಮತ್ತು ಎನ್ನೆಸ್ಸೆಸ್ ಶಿಬಿರಗಳಲ್ಲಿ ಭಾಗವಹಿಸಿದ ದಿನಗಳನ್ನು ಶಾಸಕರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗರು ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಆಧ್ಯಾತ್ಮಿಕತೆಯ ಸಾತ್ವಿಕ ಗುಣ ಹೊಂದಬೇಕೆಂದು ತಿಳಿಸಿದರು. ಭಟ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಮತ್ತು ಪ್ರಶಸ್ತಿ ವಿಜೇತ ಎನ್ನೆಸ್ಸೆಸ್ ಯೋಜನಾಧಿಕಾರಿ ವೈಶಾಲಿ ದಿಕ್ಸೂಚಿ ಭಾಷಣವನ್ನು ಮಾಡಿದರು. ದೇವಳದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಶಿಬಿರಕ್ಕೆ ಶುಭ ಕೋರಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟರಾಮ್ ಭಟ್ ಪ್ರಸ್ತಾವನೆಗೈದು ವಿದ್ಯಾರ್ಥಿಗಳು ಸದಾ ಚಟುವಟಿಕೆಗಳಿಂದ ಕೂಡಿರಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಂತಹ ಕಾರ್ಯಕ್ರಮಗಳು ಅಗತ್ಯ ಎಂದು ತಿಳಿಸಿ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಎನ್ನೆಸ್ಸೆಸ್ ಘಟಕ 1ರ ಯೋಜನಾಧಿಕಾರಿ ಹಾಗೂ ನಿರ್ವಹಣಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಜಿ.ಎಸ್ ವಂದಿಸಿದರು. ಘಟಕ 2ರ ಯೋಜನಾಧಿಕಾರಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಪ್ರಜ್ಞಾ, ಸಹ ಯೋಜನಾಧಿಕಾರಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಪ್ರವೀಣಾ ಮತ್ತು ಗ್ರಂಥಪಾಲಕಿ ಪೂರ್ಣಿಮ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಸಚಿನ್ ಎಸ್ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ಶಿಬಿರಾರ್ಥಿಗಳು “ಪ್ಲಾಸ್ಟಿಕ್ ವಿರೋಧಿ ಮತ್ತು ಪರಿಸರ ಜಾಗೃತಿ” ಜಾಥಾ ನಡೆಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!