Sunday, July 26, 2026
Sunday, July 26, 2026

ಪಾಂಡೇಶ್ವರ: ಶಾಲೆಗೆ ವಾಹನ ಕೊಡುಗೆ

ಪಾಂಡೇಶ್ವರ: ಶಾಲೆಗೆ ವಾಹನ ಕೊಡುಗೆ

Date:

ಪಾಂಡೇಶ್ವರ, ಮಾ.5: ಕರ್ಣಾಟಕ ಬ್ಯಾಂಕ್ ರಾಜ್ಯಾದ್ಯಂತ ಮನೆಯ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಇವರ ಸಮಾಜಮುಖಿ ಕಾರ್ಯಕ್ರಮಗಳು ಜನಮೆಚ್ಚುಗೆ ಗಳಿಸಿದೆ ಎಂದು ಪಾಂಡೇಶ್ವರ ಯೋಗಗುರು ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಹೇಳಿದರು. ಬುಧವಾರ ಪಾಂಡೇಶ್ವರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ಕೊಡ ಮಾಡಿದ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲೆಗೆ ವಾಹನ ಹಸ್ತಾಂತರಿಸಿ ಮಾತನಾಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಮುಖ್ಯ ಪ್ರಬಂಧಕ ಕೆ.ವಾದಿರಾಜ್, ಶತಮಾನ ಕಂಡ ಶಾಲೆಗೆ ಶತಸಂಭ್ರಮದ ಕರ್ಣಾಟಕ ಬ್ಯಾಂಕ್ ಸಹಕಾರ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು. ಶಾಲಾ ಸಂಚಾಲಕ ಫಾ. ಸುನಿಲ್ ಡಿಸಿಲ್ವ ಇವರಿಗೆ ಕರ್ಣಾಟಕ ಬ್ಯಾಂಕ್ ನ ಪ್ರಾದೇಶಿಕ ಕಛೇರಿಯ ಮುಖ್ಯ ಪ್ರಬಂಧಕ ವಾದಿರಾಜ್ ಕೀ ಹಸ್ತಾಂತರಿಸಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಕರ್ಣಾಟಕ ಬ್ಯಾಂಕ್ ಎಜಿಎಂ ಕೆ.ವಾದಿರಾಜ್ ಹಾಗೂ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ ಇವರುಗಳನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಕರ್ಣಾಟಕ ಬ್ಯಾಂಕ್ ಐರೋಡಿ ಶಾಖೆಯ ಪ್ರಬಂಧಕ ಮಂಜುನಾಥ ಶೇಟ್, ಅರವಿಂದ ಮೋಟಾಸ್೯ನ ಮಾರ್ಕೆಟಿಂಗ್ ವಿಭಾಗದ ರಾಕೇಶ್ ಇವರುಗಳನ್ನು ಗುರುತಿಸಿ ಗೌರವಿಸಲಾಯಿತು.

ಸಭೆಯಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಪೂಜಾರಿ, ಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ರವೀಶ್ ಶ್ರೀಯಾನ್, ಶಾಲಾ ಎಸ್ ಡಿ ಎಂಸಿ ಅಧ್ಯಕ್ಷೆ ಸುಜಾತ ವೆಂಕಟೇಶ ಪೂಜಾರಿ, ಪಾಂಡೇಶ್ವರ ಪಂಚಾಯತ್ ಸದಸ್ಯ ಪ್ರತಾಪ್ ಶೆಟ್ಟಿ ಸಾಸ್ತಾನ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಪೂಜಾರಿ ಸ್ವಾಗತಿಸಿ, ಸುನಿಲ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!