Sunday, July 26, 2026
Sunday, July 26, 2026

ಎನ್ ಎಸ್ ಎಸ್ ವಾರ್ಷಿಕ ಶಿಬಿರಕ್ಕೆ ಶಾಸಕರ ಭೇಟಿ

ಎನ್ ಎಸ್ ಎಸ್ ವಾರ್ಷಿಕ ಶಿಬಿರಕ್ಕೆ ಶಾಸಕರ ಭೇಟಿ

Date:

ಕೋಟೇಶ್ವರ, ಮಾ.5: ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ಕೊಟ್ಟು ಶಿಬಿರಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಸಿದರು. ಸ್ಥಳೀಯರ ಸಹಕಾರದಿಂದ ಮತ್ತು ಎಲ್ಲರ ಪರಿಶ್ರಮದಿಂದ ಶಿಬಿರವು ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಶಾಸಕರನ್ನು ಸ್ಮರಣಿಕೆಯೊಂದಿಗೆ ಸ್ವಾಗತಿಸಿ ಗೌರವಿಸಿದರು. ಐಕ್ಯೂಎಸಿ ಸಂಚಾಲಕರದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ್ ವೈದ್ಯ ಎಂ., ಹಿರಿಯ ಪ್ರಾಧ್ಯಾಪಕರಾದ ಡಾ ಶೇಖರ್ ಬಿ., ಉಪನ್ಯಾಸಕಿ ಶ್ರುತಿ ಆಚಾರ್ಯ ಎನ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ರಕ್ಷಿತ್, ಘಟಕ 1 ಮತ್ತು 2 ರ ಸಂಯೋಜನಾಧಿಕಾರಿಗಳಾದ ರೋಹಿಣಿ ಹಾಗೂ ನಿರಂಜನ ಶರ್ಮಾ, ಸ್ವಯಂಸೇವಕರಾದ ಗೌರೀಶ್, ವಿದ್ಯಾ, ದೀಪಶ್ರೀ, ರಾಘವೇಂದ್ರ, ವೈಷ್ಣವಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!