ಕೋಟೇಶ್ವರ, ಮಾ.5: ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ಕೊಟ್ಟು ಶಿಬಿರಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಸಿದರು. ಸ್ಥಳೀಯರ ಸಹಕಾರದಿಂದ ಮತ್ತು ಎಲ್ಲರ ಪರಿಶ್ರಮದಿಂದ ಶಿಬಿರವು ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಶಾಸಕರನ್ನು ಸ್ಮರಣಿಕೆಯೊಂದಿಗೆ ಸ್ವಾಗತಿಸಿ ಗೌರವಿಸಿದರು. ಐಕ್ಯೂಎಸಿ ಸಂಚಾಲಕರದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ್ ವೈದ್ಯ ಎಂ., ಹಿರಿಯ ಪ್ರಾಧ್ಯಾಪಕರಾದ ಡಾ ಶೇಖರ್ ಬಿ., ಉಪನ್ಯಾಸಕಿ ಶ್ರುತಿ ಆಚಾರ್ಯ ಎನ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ರಕ್ಷಿತ್, ಘಟಕ 1 ಮತ್ತು 2 ರ ಸಂಯೋಜನಾಧಿಕಾರಿಗಳಾದ ರೋಹಿಣಿ ಹಾಗೂ ನಿರಂಜನ ಶರ್ಮಾ, ಸ್ವಯಂಸೇವಕರಾದ ಗೌರೀಶ್, ವಿದ್ಯಾ, ದೀಪಶ್ರೀ, ರಾಘವೇಂದ್ರ, ವೈಷ್ಣವಿ ಮುಂತಾದವರು ಉಪಸ್ಥಿತರಿದ್ದರು.




By
ForthFocus™