Thursday, April 23, 2026
Thursday, April 23, 2026

ವ್ಯಸನ ಮುಕ್ತ ಸಮಾಜ ಕಾರ್ಯಾಗಾರ

ವ್ಯಸನ ಮುಕ್ತ ಸಮಾಜ ಕಾರ್ಯಾಗಾರ

Date:

ಕೋಟೇಶ್ವರ, ಮಾ.5: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿಯ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಇಕೋ ಕ್ಲಬ್ ಸಹಯೋಗದೊಂದಿಗೆ ವ್ಯಸನ ಮುಕ್ತ ಸಮಾಜ ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಯಗಾರವನ್ನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪೋಲೀಸ್ ಉಪನಿರೀಕ್ಷಕರಾದ ನಂಜಾ ನಾಯಕ್ ಅವರು ಸದೃಢ ಸಮಾಜದ ನಿರ್ಮಾಣದಲ್ಲಿ ಯುವಜನತೆ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಮಾಜಕ್ಕೆ ತೊಡಕಾಗಿರುವ ಮಾದಕ ದ್ರವ್ಯಗಳ ಸೇವನೆಯಿಂದ ದೂರವಿದ್ದು ಸಮಾಜಕ್ಕೆ ಕೊಡುಗೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಸಾಮಾಜಿಕ ಪಿಡುಗಾದ ಮಾದಕ ದ್ರವ್ಯಗಳ ಸುಳಿಗೆ ಸಿಲುಕದೆ ರಾಷ್ಟ್ರನಿರ್ಮಾಣದಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಹೇಳಿದರು. ಇಕೋ ಕ್ಲಬ್‌ನ ಸಂಚಾಲಕರಾದ ನಾಗರಾಜ ಯು ಕಾರ್ಯಕ್ರಮ ಸಂಘಟಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ನಾಗರಾಜ ವೈದ್ಯ ಎಂ., ವಿದ್ಯಾರ್ಥಿ ಪ್ರತಿನಿಧಿಗಳಾದ ಅಂತಿಮ ಬಿ.ಕಾಂ ಶಶಿಧರ ಮತ್ತು ಸಿಂಚನ ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕರಾದ ರವಿಚಂದ್ರ ಹೆಚ್.ಎಸ್ ನಿರೂಪಿಸಿದರು. ಇಕೋ ಕ್ಲಬ್‌ನ ವಿದ್ಯಾರ್ಥಿ ಪ್ರತಿನಿಧಿ ಶಶಿಧರ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!