Thursday, August 20, 2026
Thursday, August 20, 2026

ವ್ಯಸನ ಮುಕ್ತ ಸಮಾಜ ಕಾರ್ಯಾಗಾರ

ವ್ಯಸನ ಮುಕ್ತ ಸಮಾಜ ಕಾರ್ಯಾಗಾರ

Date:

ಕೋಟೇಶ್ವರ, ಮಾ.5: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿಯ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಇಕೋ ಕ್ಲಬ್ ಸಹಯೋಗದೊಂದಿಗೆ ವ್ಯಸನ ಮುಕ್ತ ಸಮಾಜ ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಯಗಾರವನ್ನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪೋಲೀಸ್ ಉಪನಿರೀಕ್ಷಕರಾದ ನಂಜಾ ನಾಯಕ್ ಅವರು ಸದೃಢ ಸಮಾಜದ ನಿರ್ಮಾಣದಲ್ಲಿ ಯುವಜನತೆ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಮಾಜಕ್ಕೆ ತೊಡಕಾಗಿರುವ ಮಾದಕ ದ್ರವ್ಯಗಳ ಸೇವನೆಯಿಂದ ದೂರವಿದ್ದು ಸಮಾಜಕ್ಕೆ ಕೊಡುಗೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಸಾಮಾಜಿಕ ಪಿಡುಗಾದ ಮಾದಕ ದ್ರವ್ಯಗಳ ಸುಳಿಗೆ ಸಿಲುಕದೆ ರಾಷ್ಟ್ರನಿರ್ಮಾಣದಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಹೇಳಿದರು. ಇಕೋ ಕ್ಲಬ್‌ನ ಸಂಚಾಲಕರಾದ ನಾಗರಾಜ ಯು ಕಾರ್ಯಕ್ರಮ ಸಂಘಟಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ನಾಗರಾಜ ವೈದ್ಯ ಎಂ., ವಿದ್ಯಾರ್ಥಿ ಪ್ರತಿನಿಧಿಗಳಾದ ಅಂತಿಮ ಬಿ.ಕಾಂ ಶಶಿಧರ ಮತ್ತು ಸಿಂಚನ ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕರಾದ ರವಿಚಂದ್ರ ಹೆಚ್.ಎಸ್ ನಿರೂಪಿಸಿದರು. ಇಕೋ ಕ್ಲಬ್‌ನ ವಿದ್ಯಾರ್ಥಿ ಪ್ರತಿನಿಧಿ ಶಶಿಧರ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!