Saturday, February 7, 2026
Saturday, February 7, 2026

ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ, ಮಾ.5: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.inಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 8 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!