Thursday, August 20, 2026
Thursday, August 20, 2026

ಶಂಕರನಾರಾಯಣ ಪದವಿ ಕಾಲೇಜಿಗೆ ಎರಡು ರ್‍ಯಾಂಕ್

ಶಂಕರನಾರಾಯಣ ಪದವಿ ಕಾಲೇಜಿಗೆ ಎರಡು ರ್‍ಯಾಂಕ್

Date:

ಬೈಂದೂರು, ಮಾ.8: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ಇಬ್ಬರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ರ್‍ಯಾಂಕ್ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಅಕ್ಷತಾ ಶೆಟ್ಟಿ ಎರಡನೇ ರ್‍ಯಾಂಕ್, ನಿರ್ವಹಣಾ ವಿಭಾಗದಲ್ಲಿ ಸ್ನೇಹದಾಸ್ 6ನೇ ರ್‍ಯಾಂಕ್ ಪಡೆದಿರುತ್ತಾರೆ. ಅಕ್ಷತಾ ಶೆಟ್ಟಿ ಹಾಲಾಡಿ ಸಮೀಪದ ಕಕ್ಕುಂಜೆಯ ಕರುಣಾಕರ್ ಶೆಟ್ಟಿ ಮತ್ತು ಮೂಕಾಂಬಿಕ ಶೆಟ್ಟಿ ದಂಪತಿಗಳ ಪುತ್ರಿ. ಸಾಯ್ಬ್ರಕಟ್ಟೆಯ ಮಂಜುನಾಥ್ ದಾಸ್ ಮತ್ತು ವತ್ಸಲಾ ದಾಸ್ ಅವರ ಪುತ್ರಿ ಸ್ನೇಹದಾಸ್ ಬಿಬಿಎ ಪದವಿಯಲ್ಲಿ 6ನೇ ರ್‍ಯಾಂಕ್ ಪಡೆದಿದ್ದಾರೆ. 20 ವರ್ಷಗಳ ನಂತರ ಪದವಿಯಲ್ಲಿ ಎರಡು ರ್‍ಯಾಂಕ್ ಪಡೆದು ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಕೇಂದ್ರವಾಗಿ ಕಾಲೇಜು ಹೊರಹೊಮ್ಮಿದೆ. ಕಳೆದ ಸಾಲಿನಲ್ಲಿ ನ್ಯಾಕ್ ಮಾನ್ಯತೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕಾಲೇಜು ಸಾಧನೆಯ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ.

ವಿದ್ಯಾರ್ಥಿಗಳ ಅಮೋಘ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕ ರಕ್ಷಕ ಸಂಘ ಮತ್ತು ಸಾರ್ವಜನಿಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!