Thursday, September 10, 2026
Thursday, September 10, 2026

ಶಂಕರನಾರಾಯಣ ಪದವಿ ಕಾಲೇಜಿಗೆ ಎರಡು ರ್‍ಯಾಂಕ್

ಶಂಕರನಾರಾಯಣ ಪದವಿ ಕಾಲೇಜಿಗೆ ಎರಡು ರ್‍ಯಾಂಕ್

Date:

ಬೈಂದೂರು, ಮಾ.8: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ಇಬ್ಬರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ರ್‍ಯಾಂಕ್ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಅಕ್ಷತಾ ಶೆಟ್ಟಿ ಎರಡನೇ ರ್‍ಯಾಂಕ್, ನಿರ್ವಹಣಾ ವಿಭಾಗದಲ್ಲಿ ಸ್ನೇಹದಾಸ್ 6ನೇ ರ್‍ಯಾಂಕ್ ಪಡೆದಿರುತ್ತಾರೆ. ಅಕ್ಷತಾ ಶೆಟ್ಟಿ ಹಾಲಾಡಿ ಸಮೀಪದ ಕಕ್ಕುಂಜೆಯ ಕರುಣಾಕರ್ ಶೆಟ್ಟಿ ಮತ್ತು ಮೂಕಾಂಬಿಕ ಶೆಟ್ಟಿ ದಂಪತಿಗಳ ಪುತ್ರಿ. ಸಾಯ್ಬ್ರಕಟ್ಟೆಯ ಮಂಜುನಾಥ್ ದಾಸ್ ಮತ್ತು ವತ್ಸಲಾ ದಾಸ್ ಅವರ ಪುತ್ರಿ ಸ್ನೇಹದಾಸ್ ಬಿಬಿಎ ಪದವಿಯಲ್ಲಿ 6ನೇ ರ್‍ಯಾಂಕ್ ಪಡೆದಿದ್ದಾರೆ. 20 ವರ್ಷಗಳ ನಂತರ ಪದವಿಯಲ್ಲಿ ಎರಡು ರ್‍ಯಾಂಕ್ ಪಡೆದು ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಕೇಂದ್ರವಾಗಿ ಕಾಲೇಜು ಹೊರಹೊಮ್ಮಿದೆ. ಕಳೆದ ಸಾಲಿನಲ್ಲಿ ನ್ಯಾಕ್ ಮಾನ್ಯತೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕಾಲೇಜು ಸಾಧನೆಯ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ.

ವಿದ್ಯಾರ್ಥಿಗಳ ಅಮೋಘ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕ ರಕ್ಷಕ ಸಂಘ ಮತ್ತು ಸಾರ್ವಜನಿಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!