ಉಡುಪಿ, ಮಾ.17: ಉಡುಪಿ ಜಿಲ್ಲೆಯು ಒಂದು ಉತ್ತಮ ಪ್ರವಾಸಿ ಕೇಂದ್ರವಾಗಿದ್ದು, ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಅವರ ಸುರಕ್ಷತೆಗಾಗಿ ಸರ್ಕಾರದಿಂದ ತಿಳಿಸಲಾದ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಎಲ್ಲಾ ಹೋಂ ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, ಪ್ರವಾಸಿ ಬೋಟ್, ಕಯಾಕ್ (Registered, Unregistered) ಮಾಲೀಕರ ಸಭೆ ಕರೆಯಲಾಗಿದ್ದು, ಸದರಿ ಸಭೆಗೆ ಎಲ್ಲಾ ಹೋಂ ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, ಪ್ರವಾಸಿ ಬೋಟ್, ಕಯಾಕ್ ಮಾಲೀಕರು ತಪ್ಪದೇ ಹಾಜರಾಗುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆ: ಮಾ. 20 ರಂದು ಉಡುಪಿ ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ
ಪ್ರವಾಸಿಗರ ಸುರಕ್ಷತೆ: ಮಾ. 20 ರಂದು ಉಡುಪಿ ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ
Date:




By
ForthFocus™