Monday, February 24, 2025
Monday, February 24, 2025

ನಾಳೆ ಕಡಿಯಾಳಿ ಗ್ರಾಮ ಭಜನೆ ಮಂಗಲೋತ್ಸವ

ನಾಳೆ ಕಡಿಯಾಳಿ ಗ್ರಾಮ ಭಜನೆ ಮಂಗಲೋತ್ಸವ

Date:

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏಪ್ರಿಲ್ 2ರಿಂದ ಪ್ರಾರಂಭವಾದ ಗ್ರಾಮದ ಮನೆ ಮನೆ ಭಜನೆ ಗ್ರಾಮ ಭಜನೆ ಕಾರ್ಯಕ್ರಮ ನಾಳೆ ಏ. 23 ರ ಶನಿವಾರ ಸಾಯಂಕಾಲ 4.00 ಗಂಟೆಗೆ ಶ್ರೀಕೃಷ್ಣ ಮಠದಿಂದ ಶ್ರೀಕ್ಷೇತ್ರ ಕಡಿಯಾಳಿಯ ತನಕ ಧಿಂಡಿ ಭಜನೆ ಬೃಹತ್ ಮೆರವಣಿಗೆಯೊಂದಿಗೆ ನಡೆಯಲಿದೆ.

ಉಡುಪಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ.

ಈ ಮೆರವಣಿಗೆಯಲ್ಲಿ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮತ್ತು ಶಾಸಕರಾದ ಕೆ ರಘುಪತಿ ಭಟ್, ಉಡುಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ ವಿ ಶೆಣೈ, ಉಡುಪಿ ಪುತ್ತೂರು ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮುಕ್ತೇಸರರಾದ ನಾಗೇಶ್ ಗಾಂವಸ್ಕರ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗಡೆ, ಕಡಿಯಾಳಿ ದೇವಳದ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ರವಿರಾಜ ಆಚಾರ್ಯ ಉಪಸ್ಥಿತರಿರಲಿದ್ದಾರೆ.

ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು, ಹಲವಾರು ಭಜನಾ ತಂಡಗಳು ಮತ್ತು ಭಜನೆಗೆ ನಾಂದಿ ಹಾಡಿದ ದಾಸರೇಣ್ಯರು, ಮತ್ತು ಪೌರಾಣಿಕ ಹಿನ್ನೆಲೆಯ ವೇಷಭೂಷಣಗಳು ಇರಲಿವೆ.

ಭಜನಾ ಕಾರ್ಯಕ್ರಮದ ನಂತರ ದೇವಳದಲ್ಲಿ ವಸಂತ ಫಲಾಹಾರದ ವ್ಯವಸ್ಥೆ ಮಾಡಲಾಗಿದೆ.

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯದ ಭಜನೆ ಆಗಮಿಸಿದ ಪ್ರತಿ ಮನೆಯ ಕನಿಷ್ಠ ಇಬ್ಬರಾದರೂ ಹಾಜರಿದ್ದು ಭಜನಾ ಮಂಗಲೋತ್ಸವ ಯಶಸ್ವಿಗೊಳಿಸಬೇಕಾಗಿ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!