ಕಲ್ಮಾಡಿ, ಮಾ.17: ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನ ಗರೋಡಿ ಬಳಿಯ ದೇವರಕೆರೆ ಅಭಿವೃದ್ದಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉಡುಪಿ ನಗರಸಭೆ ವತಿಯಿಂದ ಸುಮಾರು 35 ಲಕ್ಷ ವೆಚ್ಚದಲ್ಲಿ ದೇವರಕೆರೆ ಅಭಿವೃದ್ಧಿ ನಡೆಯಲಿದ್ದು, ಕೆರೆಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟವನ್ನು ಸುಧಾರಿಸಲು ಕೆರೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.
ಉಡುಪಿ ನಗರಸಭೆ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ಸ್ಥಳೀಯ ಮುಖಂಡರಾದ ಲಕ್ಷ್ಮೀಶ ಬಂಗೇರ, ವಿನಯ ಕಲ್ಮಾಡಿ, ವಿವೇಕ್, ದಾಮೋದರ ಕಲ್ಮಾಡಿ, ರಾಘವ ಪೂಜಾರಿ, ರಮೇಶ್ ಮಾಸ್ಟರ್, ಇಂದಿರಾ ಶೇಖರ್, ಚಂದ್ರಕಾಂತ ಕಲ್ಮಾಡಿ, ಜಯರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.




By
ForthFocus™