Tuesday, July 28, 2026
Tuesday, July 28, 2026

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಮಾ.19: ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ರವರು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ನಗರಸಭೆಗೆ ಪೂರ್ಣಕಾಲಿಕ ಖಾಯಂ ಪೌರಾಯುಕ್ತ ಹುದ್ದೆ ಖಾಲಿ ಇದ್ದು, ಕಳೆದ ಹಲವಾರು ತಿಂಗಳಿನಿಂದ ಪೂರ್ಣಕಾಲಿಕ ಪೌರಾಯುಕ್ತರಿಲ್ಲದೆ ನಗರಸಭೆಯ ಆಡಳಿತಾತ್ಮಕ ಕಾರ್ಯಗಳು ಹಾಗೂ ಸಾರ್ವಜನಿಕರ ದಿನನಿತ್ಯದ ಸೇವೆಗಳಿಗೆ ಸಮಸ್ಯೆಯಾಗುತ್ತಿರುವುದರಿಂದ ಪೂರ್ಣಕಾಲಿಕ ಪೌರಾಯುಕ್ತರನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ನಗರಸಭೆಯ ನೀರು ಸರಬರಾಜು ಅನುದಾನದಲ್ಲಿ ಲಭ್ಯವಿರುವ ನಿಧಿಯನ್ನು ಸಾಮಾನ್ಯ ನಿಧಿಯಾಗಿ ಸಿವಿಲ್ ಕಾಮಗಾರಿಗಳಿಗೆ ಬಳಸಲು ಸಲ್ಲಿಸಿದ ಪ್ರಸ್ತಾವನೆಗೆ ಶೀಘ್ರಅನುಮೋದನೆ, ನಗರಸಭೆಯ ನೂತನ ಕಛೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಹಾಗೂ ಉಡುಪಿ ನಗರದ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖೆಯ ಮೂಲಕ ವಿಶೇಷ ಅನುದಾನ ಒದಗಿಸಿ ಸಹಕಾರ ನೀಡುವಂತೆ ಶಾಸಕ ಯಶ್ಪಾಲ್ ಸುವರ್ಣ ಸಚಿವರಿಗೆ ಕೋರಿದರು. ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲೇ ನೇಮಕ ಹಾಗೂ ಅನುದಾನ ಬೇಡಿಕೆಯ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!