Saturday, March 21, 2026
Saturday, March 21, 2026

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಮಾ.19: ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ರವರು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ನಗರಸಭೆಗೆ ಪೂರ್ಣಕಾಲಿಕ ಖಾಯಂ ಪೌರಾಯುಕ್ತ ಹುದ್ದೆ ಖಾಲಿ ಇದ್ದು, ಕಳೆದ ಹಲವಾರು ತಿಂಗಳಿನಿಂದ ಪೂರ್ಣಕಾಲಿಕ ಪೌರಾಯುಕ್ತರಿಲ್ಲದೆ ನಗರಸಭೆಯ ಆಡಳಿತಾತ್ಮಕ ಕಾರ್ಯಗಳು ಹಾಗೂ ಸಾರ್ವಜನಿಕರ ದಿನನಿತ್ಯದ ಸೇವೆಗಳಿಗೆ ಸಮಸ್ಯೆಯಾಗುತ್ತಿರುವುದರಿಂದ ಪೂರ್ಣಕಾಲಿಕ ಪೌರಾಯುಕ್ತರನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ನಗರಸಭೆಯ ನೀರು ಸರಬರಾಜು ಅನುದಾನದಲ್ಲಿ ಲಭ್ಯವಿರುವ ನಿಧಿಯನ್ನು ಸಾಮಾನ್ಯ ನಿಧಿಯಾಗಿ ಸಿವಿಲ್ ಕಾಮಗಾರಿಗಳಿಗೆ ಬಳಸಲು ಸಲ್ಲಿಸಿದ ಪ್ರಸ್ತಾವನೆಗೆ ಶೀಘ್ರಅನುಮೋದನೆ, ನಗರಸಭೆಯ ನೂತನ ಕಛೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಹಾಗೂ ಉಡುಪಿ ನಗರದ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖೆಯ ಮೂಲಕ ವಿಶೇಷ ಅನುದಾನ ಒದಗಿಸಿ ಸಹಕಾರ ನೀಡುವಂತೆ ಶಾಸಕ ಯಶ್ಪಾಲ್ ಸುವರ್ಣ ಸಚಿವರಿಗೆ ಕೋರಿದರು. ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲೇ ನೇಮಕ ಹಾಗೂ ಅನುದಾನ ಬೇಡಿಕೆಯ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...

ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಲೋಕಾರ್ಪಣೆ

ಉಡುಪಿ, ಮಾ;.21: ಸುಮಾರು 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಯಾಣಪುರ ಗ್ರಾಮ...

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!