Saturday, September 21, 2024
Saturday, September 21, 2024

ಕೋಟ- ಪಂಚಾಯತ್ ಗೆ ಮುತ್ತಿಗೆ ಹಾಕಿದ ಪುಟಾಣಿಗಳು

ಕೋಟ- ಪಂಚಾಯತ್ ಗೆ ಮುತ್ತಿಗೆ ಹಾಕಿದ ಪುಟಾಣಿಗಳು

Date:

ಕೋಟ: ರಾಷ್ಟ್ರ‍ೀಯ ಪಂಚಾಯತ್ ರಾಜ್ ದಿನದಂದೇ ಕೋಟತಟ್ಟು ಗ್ರಾಮ ಪಂಚಾಯತ್ ಗೆ ನೂರಾರು ಪುಟಾಣಿಗಳು ಮುತ್ತಿಗೆ ಹಾಕಿ ಘೋಷಣೆ ಕೂಗಿ ಮನವಿ ಸಲ್ಲಿಸಿದ ಪ್ರಸಂಗ ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ.

ಹೌದು… ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಆಶ್ರಯದಲ್ಲಿ ನಡೆಯುತ್ತಿರುವ ದಿ. ಕೆ.ಸಿ ಕುಂದರ್ ಸ್ಮರಣಾರ್ಥ ನರೇಂದ್ರ ಕುಮಾರ್ ಕೋಟ ಸಾರಥ್ಯದಲ್ಲಿ ಉಚಿತ ಬೇಸಿಗೆ ಶಿಬಿರ ಗಮನ-2022 (ಮಕ್ಕಳ ಹಬ್ಬದ ದಿಮ್ಸಾಲ್) ಕಾರ್ಯಕ್ರಮದ ಕೊನೆಯ ದಿನದಂದು ಜಲ ಉಳಿಸಿ ಎನ್ನುವ ವಿಷಯದೊಂದಿಗೆ ಕಾರಂತ ಥೀಮ್ ಪಾರ್ಕ್ನಿಂದ ಅಮೃತೇಶ್ವರಿ ಮಾರ್ಗವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ತನಕ ಸಾಗಿ ಘೋಷಣೆ ಕೂಗುತ್ತಾ ಕೈಯಲ್ಲಿ ಬಿತ್ತಿ ಪತ್ರ ಹಿಡಿದು ಜಲ ಉಳಿಸಿ ಮಿತವಾಗಿ ನೀರು ಬಳಸಿ ಎನುತ್ತಾ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು, ಅಧಿಕಾರಿ ವರ್ಗದವರಿಗೆ ಮನವಿ ಸಲ್ಲಿಸಿ ನೀರು ಮಿತವಾಗಿ ಬಳಸುವ ಬಗ್ಗೆ ಜನರಿಗೆ ಮನವರಿಕೆಯ ಯೋಜನೆಗಳನ್ನು ಹಾಕಬೇಕಾಗಿ ಒತ್ತಾಯಿಸಿದರು.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಕೋಟತಟ್ಟು ಗ್ರಾಮ ಪಂಚಾಯತ್, ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಕೊಳ್ಳಲಾಗುವುದು. ನಿಮ್ಮ ಬೇಡಿಕೆಗಾಗಿ ನಿಮಗಾಗಿ ವಿಶೇಷ ಮಕ್ಕಳ ಗ್ರಾಮ ಸಭೆ ನಡೆಸಲಾಗುವುದೆಂದರು. ಮಕ್ಕಳ ಈ ಅರಿವು ಜಾಥದ ಬಗ್ಗೆ ವ್ಯಾಪಕ ಪ್ರಶಂಸೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತು.

ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಪ್ರಮೋದ್ ಹಂದೆ, ಸತೀಶ್ ಬಾರಿಕೆರೆ, ಪ್ರಕಾಶ್ ಹಂದಟ್ಟು, ವಿದ್ಯಾ ಸಾಲಿಯಾನ್, ರವೀಂದ್ರ ತಿಂಗಳಾಯ, ಕಾರ್ಯದರ್ಶಿ
ಶೇಖರ್ ಮರವಂತೆ, ಶಿಬಿರದ ಸಹ ನಿರ್ದೇಶಕ ಕುಮಾರ್ ಸಾಲಿಗ್ರಾಮ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್, ಕೋಟ ಪೋಲಿಸ್ ಠಾಣಾ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!