Friday, June 19, 2026
Friday, June 19, 2026

ಏ.19: ಯಕ್ಷಧ್ರುವ ಪಟ್ಲಾಶ್ರಯ ಭೂಮಿಪೂಜೆ

ಏ.19: ಯಕ್ಷಧ್ರುವ ಪಟ್ಲಾಶ್ರಯ ಭೂಮಿಪೂಜೆ

Date:

ಉಡುಪಿ, ಏ.10: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರಿಂದ ಪ್ರೊ. ಎಂ. ಎಲ್. ಸಾಮಗರು ದಾನವಾಗಿ ನೀಡಿರುವ ನಿವೇಶನದಲ್ಲಿ ಯಕ್ಷಗಾನ ಕಲಾವಿದರಿಗೋಸ್ಕರ ನಿರ್ಮಾಣಗೊಳ್ಳಲಿರುವ ಗೃಹಸಮುಚ್ಚಯ “ಯಕ್ಷಧ್ರುವ ಪಟ್ಲಾಶ್ರಯ” ಇದರ ಭೂಮಿಪೂಜೆಯು ಏ.19 ಶನಿವಾರ ಬೆಳಗ್ಗೆ 10 ಘಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರಭಾರತೀ ಸ್ವಾಮಿಗಳವರ ಅಮೃತ ಹಸ್ತದಿಂದ ಉಡುಪಿ ಕೊಡವೂರಿನ ಲಕ್ಷ್ಮೀನಗರ ಗರ್ಡೆಯಲ್ಲಿ ಸಂಪನ್ನಗೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಹಾಗೂ ಪೂರ್ವತಯಾರಿಯ ಬಗ್ಗೆ ಸಮಾಲೋಚಿಸಲಾಯಿತು.

ಪಟ್ಲ ಸತೀಶ ಶೆಟ್ಟಿ, ತೋಟದಮನೆ ದಿವಾಕರ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ವಿದ್ವಾನ್ ದಾಮೋದರ ಶರ್ಮ ಬಾರ್ಕೂರು, ಭುವನಪ್ರಸಾದ ಹೆಗ್ಡೆ, ಸುಧಾಕರ ಆಚಾರ್ಯ, ಹರೀಶ ಜೋಷಿ, ತ್ರಿಲೋಚನ ಶಾಸ್ತ್ರೀ, ವಿಶ್ವನಾಥ ಶ್ಯಾನುಭಾಗ್, ಆನಂದ ಶೆಟ್ಟಿ, ರತನ್ ರಾಜ್ ರೈ, ಇಂಜಿನಿಯರ್ ನಾಗರಾಜ ಐತಾಳ್ ಹಾಗೂ ರೋಶನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!