Saturday, May 30, 2026
Saturday, May 30, 2026

ಏ.19: ಯಕ್ಷಧ್ರುವ ಪಟ್ಲಾಶ್ರಯ ಭೂಮಿಪೂಜೆ

ಏ.19: ಯಕ್ಷಧ್ರುವ ಪಟ್ಲಾಶ್ರಯ ಭೂಮಿಪೂಜೆ

Date:

ಉಡುಪಿ, ಏ.10: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರಿಂದ ಪ್ರೊ. ಎಂ. ಎಲ್. ಸಾಮಗರು ದಾನವಾಗಿ ನೀಡಿರುವ ನಿವೇಶನದಲ್ಲಿ ಯಕ್ಷಗಾನ ಕಲಾವಿದರಿಗೋಸ್ಕರ ನಿರ್ಮಾಣಗೊಳ್ಳಲಿರುವ ಗೃಹಸಮುಚ್ಚಯ “ಯಕ್ಷಧ್ರುವ ಪಟ್ಲಾಶ್ರಯ” ಇದರ ಭೂಮಿಪೂಜೆಯು ಏ.19 ಶನಿವಾರ ಬೆಳಗ್ಗೆ 10 ಘಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರಭಾರತೀ ಸ್ವಾಮಿಗಳವರ ಅಮೃತ ಹಸ್ತದಿಂದ ಉಡುಪಿ ಕೊಡವೂರಿನ ಲಕ್ಷ್ಮೀನಗರ ಗರ್ಡೆಯಲ್ಲಿ ಸಂಪನ್ನಗೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಹಾಗೂ ಪೂರ್ವತಯಾರಿಯ ಬಗ್ಗೆ ಸಮಾಲೋಚಿಸಲಾಯಿತು.

ಪಟ್ಲ ಸತೀಶ ಶೆಟ್ಟಿ, ತೋಟದಮನೆ ದಿವಾಕರ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ವಿದ್ವಾನ್ ದಾಮೋದರ ಶರ್ಮ ಬಾರ್ಕೂರು, ಭುವನಪ್ರಸಾದ ಹೆಗ್ಡೆ, ಸುಧಾಕರ ಆಚಾರ್ಯ, ಹರೀಶ ಜೋಷಿ, ತ್ರಿಲೋಚನ ಶಾಸ್ತ್ರೀ, ವಿಶ್ವನಾಥ ಶ್ಯಾನುಭಾಗ್, ಆನಂದ ಶೆಟ್ಟಿ, ರತನ್ ರಾಜ್ ರೈ, ಇಂಜಿನಿಯರ್ ನಾಗರಾಜ ಐತಾಳ್ ಹಾಗೂ ರೋಶನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೈಋತ್ಯ ಮಾನ್ಸೂನ್- ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ: ಐಎಂಡಿ ಮುನ್ಸೂಚನೆ

ನವದೆಹಲಿ, ಮೇ 29: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ ಮತ್ತು...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಮೇ 29: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ...
error: Content is protected !!