Sunday, May 3, 2026
Sunday, May 3, 2026

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Date:

ಕಾರ್ಕಳ/ಉಡುಪಿ, ಏ.10: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದಲ್ಲಿ 10 ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ತಾನಿಗಳಾದ ಕಾರ್ಕಳ ಜ್ಞಾನಸುಧಾಧದ ಶ್ರೀರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಕು.ಸಹನಾ ನಾಯಕ್ ಮತ್ತು ತನ್ವಿ ರಾವ್ ಇವರೊಂದಿಗೆ ಇತರ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾದ ಸಿ.ಇ.ಒ ದಿನೇಶ್ ಎಂ ಕೊಡವೂರ್, ಉಡುಪಿ ಜ್ಞಾನಸುಧಾದ ಪ್ರಾಂಶುಪಾಲರಾದ ಸಂತೋಷ್ ಹಾಗೂ ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಸಾಧಕ ವಿದ್ಯಾರ್ಥಿಗಳ ಹೆತ್ತವರು ಹಾಗೂ ಹಿತೈಷಿಗಳಾದ ತ್ರಿವಿಕ್ರಮ ಕಿಣಿ ಹಾಗೂ ದೇವೇಂದ್ರ ನಾಯಕ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಆಂಗ್ಲಭಾಷಾ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ...

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ...

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮ ವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.2: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ...

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!